ಶಿವಮೊಗ್ಗ : ಅಪ್ರಾಪ್ತನ ಕೈಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ್ದ ಪೋಷಕರಿಗೆ ಶಿವಮೊಗ್ಗ ನ್ಯಾಯಾಲಯ 25 ಸಾವಿರ ರೂ. ದಂಡ (Fine) ವಿಧಿಸಿ ಆದೇಶಿಸಿದೆ.
ಫೆ.24ರಂದು ಮೀನಾಕ್ಷಿ ಭವನ ಹೊಟೇಲ್ ಸಮೀಪ ಸಂಚಾರ ಠಾಣೆ ಇನ್ಸ್ಪೆಕ್ಟರ್ ಸಂತೋಷ್ ಕುಮಾರ್ ತಪಾಸಣೆ ನಡೆಸುತ್ತಿದ್ದರು. ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಯುವಕನನ್ನು ತಡೆದು ಪರಿಶೀಲಿಸಿದಾಗ ಆತ ಅಪ್ರಾಪ್ತ ಎಂಬುದು ತಿಳಿದು ಬಂದಿತ್ತು. ಈ ಹಿನ್ನೆಲೆ ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದು, ಆತನ ಪೋಷಕರ ವಿರುದ್ಧ ಪ್ರಕರಣ ದಾಖಲಿಸಿದ್ದರು.
ತನಿಖೆ ನಡೆಸಿದ ಇನ್ಸ್ಪೆಕ್ಟರ್ ಸಂತೋಷ್ ಕುಮಾರ್ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ, ಮೊಪೆಡ್ ಮಾಲೀಕ ಬಾಪೂಜಿನಗರ ನಿವಾಸಿಗೆ ದಂಡ ವಿಧಿಸಿ ಆದೇಶಿಸಿದೆ.

ಇದನ್ನೂ ಓದಿ » ಕೋಣಂದೂರು ಸಮೀಪ ಕಾರುಗಳ ಸರಣಿ ಅಪಘಾತ, ಹರಿಹರಪುರ ಮಠದ ಶ್ರೀಗಳು ಪಾರು
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200