SHIVAMOGGA LIVE | 19 JULY 2023
SHIMOGA : ರಾತ್ರಿ ಗಸ್ತು ವೇಳೆ ಅನುಮಾನಾಸ್ಪದ ವ್ಯಕ್ತಿಯೊಬ್ಬನ ಬೆರಳಚ್ಚು (finger print) ಪಡೆದು ಪೊಲೀಸರು ಪರಿಶೀಲನೆ ನಡೆಸಿದಾಗ ಅಪರಾಧ ಹಿನ್ನೆಲೆ ಪತ್ತೆಯಾಗಿದೆ. ಕೂಲಂಕಷವಾಗಿ ಪರಿಶೀಲಿಸಿದಾಗ ಪ್ರಕರಣವೊಂದರ ಸಂಬಂಧ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿರುವುದು ಗೊತ್ತಾಗಿದೆ.
ದರೋಡೆ ಪ್ರಕರಣದ ಆರೋಪಿ ನವೀನ್ ನಾಯ್ಕ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆತನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಹೇಗೆ ಸಿಕ್ಕಿಬಿದ್ದ ನವೀನ್ ನಾಯ್ಕ?
ದೊಡ್ಡಪೇಟೆ ಠಾಣೆ ಸಿಬ್ಬಂದಿ ಗಂಗಪ್ಪ ತುಂಗಲ್ ಅವರು ರಾತ್ರಿ ಗಸ್ತು ನಡೆಸುತ್ತಿದ್ದರು. ಈ ವೇಳೆ ಅನುಮಾನಾಸ್ಪದ ವ್ಯಕ್ತಿಗಳ ವಿಚಾರಣೆ ನಡೆಸುತ್ತಿದ್ದರು. ಮೊಬೈಲ್ ಕ್ರೈಮ್ ಕ್ರಿಮಿನಲ್ ಟ್ರ್ಯಾಕಿಂಗ್ ನೆಟ್ವರ್ಕ್ ಸಿಸ್ಟಮ್ ತಂತ್ರಾಂಶದ ಮೂಲಕ ಅನುಮಾನಾಸ್ಪದ ವ್ಯಕ್ತಿಗಳ ಫಿಂಗರ್ ಪ್ರಿಂಟ್ ಸ್ಕ್ಯಾನ್ (finger print) ಮಾಡಲಾಯಿತು. ಈ ವೇಳೆ ನವೀನ್ ನಾಯ್ಕನಿಗೆ ಅಪರಾಧ ಹಿನ್ನಲೆ ಇರುವುದು ಗೊತ್ತಾಗಿದೆ.
ವಿಚಾರಣೆ ನಡೆಸಿದಾಗ ದರೋಡೆ ಪ್ರಕರಣವೊಂದರಲ್ಲಿ ನವೀನ್ ನಾಯ್ಕ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಅನ್ನುವುದು ತಿಳಿದು ಬಂದಿದೆ. ಅಲ್ಲದೆ ಆತನ ವಿರುದ್ಧ ವಾರಂಟ್ ಕೂಡ ಜಾರಿಯಾಗಿತ್ತು. ಕೂಡಲೆ ಆತನನ್ನು ಬಂಧಿಸಿದ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಇದನ್ನೂ ಓದಿ – ಡೇಂಜರ್ ರೋಡ್ ಆಗುತ್ತಿದೆ ಶಿವಮೊಗ್ಗದ ಕಾಂಕ್ರಿಟ್ ರಸ್ತೆ, ಯಾಕೆ? ಇಲ್ಲಿದೆ 4 ಪ್ರಮುಖ ಪಾಯಿಂಟ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200