ಕಸ ಸಂಗ್ರಹಕ್ಕೆ ಹೋದ ಪೌರ ಕಾರ್ಮಿಕರಿಗೆ ರಕ್ತ ಬರುವಂತೆ ಹೊಡೆದವರ ವಿರುದ್ಧ ಎಫ್ಐಆರ್

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ನವೆಂಬರ್ 20210

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಮನೆಗಳಲ್ಲಿ ಕಸ ಸಂಗ್ರಹಕ್ಕೆ ಹೋಗಿದ್ದ ಪೌರ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಸುಮಾರು ಹತ್ತು ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.

ಪೌರ ಕಾರ್ಮಿಕರಾದ ದೇವರಾಜ್ ಮತ್ತು ಮಂಜುನಾಥ ನಾಯ್ಕ್ ಅವರ ಮೇಲೆ ಹಲ್ಲೆಯಾಗಿತ್ತು. ಅಲ್ಲದೆ ಮಹಾನಗರ ಪಾಲಿಕೆ ಕಸ ಸಂಗ್ರಹಣೆ ವಾಹನದ ಗಾಜಿಗೆ ಹಾನಿ ಮಾಡಲಾಗಿತ್ತು. ಈ ಸಂಬಂಧ ಶಿವಮೊಗ್ಗ ಲೈವ್.ಕಾಂ ವರದಿ ಮಾಡಿತ್ತು. ಅದರ ಲಿಂಕ್ ಇಲ್ಲಿದೆ. ಕಸ ಸಂಗ್ರಹಕ್ಕೆ ಹೋದಾಗ ಪಾಲಿಕೆ ಪೌರ ಕಾರ್ಮಿಕರ ಮೇಲೆ ಹಲ್ಲೆ, ವಾಹನದ ಮೇಲೆ ದಾಳಿ

ಘಟನೆ ಸಂಬಂಧ ಪೌರ ಕಾರ್ಮಿಕರು ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ. ಟಿಪ್ಪುನಗರದ ಗೌಸಿಯಾ ಸರ್ಕಲ್ ಸಮೀಪದ ಯುಸುಫ್, ಶಾರುಖ್ ಮತ್ತು ಇತರೆ ಎಂಟರಿಂದ ಹತ್ತು ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ದೂರಿನಲ್ಲಿ ಏನಿದೆ?

ನ.15ರಂದ ಬೆಳಗ್ಗೆ ಕಸ ಸಂಗ್ರಹ ಮಾಡಲು ಟಿಪ್ಪು ನಗರದ ಜೆಪಿ ನಗರಕ್ಕೆ ಪೌರ ಕಾರ್ಮಿಕರು ತೆರಳಿದ್ದರು. ಮಹಿಳೆಯೊಬ್ಬರು ಚೀಲದಲ್ಲಿ ಕಸ ತಂದು ಕೊಟ್ಟಿದ್ದಾರೆ. ಹಸಿ ಮತ್ತು ಒಣ ಕಸ ವಿಂಗಡಿಸಿ ಕೊಡಲು ಪ್ಲಾಸ್ಟಿಕ್ ಬುಟ್ಟಿ ನೀಡಲಾಗಿದೆ. ವಿಂಗಡಣೆ ಮಾಡಿ ಕೊಡುವಂತೆ ಪೌರ ಕಾರ್ಮಿಕ ದೇವರಾಜ್ ಮಹಿಳೆಗೆ ತಿಳಿಸಿದ್ದಾರೆ. ಆಗ ಅಲ್ಲಿಯೇ ಇದ್ದ ಯುವಕನೊಬ್ಬ ದೇವರಾಜ್ ಮೇಲೆ ಹಲ್ಲೆ ನಡೆಸಿದ್ದಾನೆ.

ADVT JULY NANJAPPA HOSPITAL HOME LAB TESTING

ಆತನ ಜೊತೆಗೆ ಎಂಟರಿಂದ ಹತ್ತು ಮಂದಿ ಹಲ್ಲೆ ಮಾಡಲು ಆರಂಭಿಸಿದ್ದಾರೆ. ಈ ವೇಳೆ ಯುವಕನೊಬ್ಬ ದೊಣ್ಣೆಯಿಂದ ದೇವರಾಜ್ ತಲೆಗೆ ಹೊಡೆದಿದ್ದಾನೆ. ಬಿಡಿಸಲು ಹೋದ ಪಾಲಿಕೆ ವಾಹನ ಚಾಲಕ ಮಂಜುನಾಥ ನಾಯ್ಕ್ ಅವರ ಮೇಲೂ ಹಲ್ಲೆ ನಡೆಸಲಾಗಿದೆ.

shivamogga live subscirbe contact

ಕೂಡಲೆ ಸ್ಥಳೀಯರು ಮತ್ತು ಇತರೆ ಪೌರ ಕಾರ್ಮಿಕರು ಬಂದು ಜಗಳ ಬಿಡಿಸಿದ್ದಾರೆ. ಈ ಸಂಬಂಧ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment