ಶಿವಮೊಗ್ಗದ ಲೈವ್.ಕಾಂ | SHIMOGA NEWS | 10 ಫೆಬ್ರವರಿ 2022
ಕೇಸರಿ ಧ್ವಜ ಹಾರಿಸಿದ್ದ ಧ್ವಜ ಸ್ತಂಭದಲ್ಲಿ ತ್ರಿವರ್ಣ ಧ್ವಜ ಹಾರಿಸಿದವರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ನಿರ್ಧರಿಸಿದೆ.
ಶಿವಮೊಗ್ಗದ ಬಾಪೂಜಿನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ NSUI ಸಂಘಟನೆ ಕಾರ್ಯಕರ್ತರು ರಾಷ್ಟ್ರಧ್ವಜ ಹಾರಿಸಿದ್ದರು. ಧ್ವಜಾರೋಹಣ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ.
ಕ್ರಮ ಕೈಗೊಳ್ಳಲು ಕಾರಣವೇನು?
ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್ ಅವರು, ಕೆಲವರು ‘ಬಾಪೂಜಿನಗರ ಕಾಲೇಜಿನಲ್ಲಿ ರಾಷ್ಟ್ರಧ್ವಜ ಹಾರಿಸಿದ್ದಾರೆ. 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿದೆ. ಇದನ್ನು ಮೀರಿ ಕೆಲವರು ಧ್ವಜಾರೋಹಣ ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದು ತಿಳಿಸಿದ್ದಾರೆ.
ನಿಷೇಧಾಜ್ಞೆ ಇದ್ದರೂ ನಿಗದಿಗಿಂತಲೂ ಹೆಚ್ಚು ಸಂಖ್ಯೆಯಲ್ಲಿ ಗೂಂಪುಗೂಡಲಾಗಿದೆ. ಇನ್ನು, ಕಾಲೇಜು ಆಡಳಿತ ಮಂಡಳಿಯ ಅನುಮತಿ ಇಲ್ಲದೆ ಏಕಾಏಕಿ ಧ್ವಜಾಹೋರಣ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ.
» ಇದನ್ನೂ ಓದಿ | ಕೇಸರಿ ಧ್ವಜ ಹಾರಿಸಿದ್ದ ಧ್ವಜಸ್ತಂಭದಲ್ಲಿ ಇವತ್ತು ರಾಷ್ಟ್ರಧ್ವಜ ಹಾರಾಟ
About Shivamogga Live | Shimoga District Profile | Whatsapp Number 7411700200
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200