ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | FIRING | 3 ಜೂನ್ 2022
ಶಿವಮೊಗ್ಗದಲ್ಲಿ ಇವತ್ತು ಬೆಳಗ್ಗೆ ರೌಡಿಯೊಬ್ಬನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ರೌಡಿ ಹರ್ಷದ್ ಅಲಿಯಾಸ್ ಜಾಮೂನ್ (30) ಎಂಬಾತನ ಬಲಗಾಲಿಗೆ ಗುಂಡು ಹೊಡೆಯಲಾಗಿದೆ. ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಹರ್ಷದ್ ಸಾಮಾನ್ಯ ಆರೋಪಿಯಲ್ಲ. ಹತ್ತು ವರ್ಷದ ಜೈಲು ಶಿಕ್ಷೆಯಾದ ಪ್ರಕರಣದಲ್ಲಿ, ಸುಪ್ರೀಂ ಕೋರ್ಟ್’ನಿಂದ ಜಾಮೀನು ಪಡೆದು ಬಂದಿದ್ದಾನೆ.
ಯಾರಿವನು ಹರ್ಷದ್?
ಬುದ್ದಾನಗರ ನಿವಾಸಿ ಹರ್ಷದ್ ಅಲಿಯಾಸ್ ಜಾಮೂನು ಹಲ್ಲೆ, ಮನೆಗಳ್ಳತನ ಮತ್ತು ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಈತನ ವಿರುದ್ಧ ವಿವಿಧ ಠಾಣೆಗಳಲ್ಲಿ ಐದು ಪ್ರಕರಣ ದಾಖಲಾಗಿವೆ. ಈ ಹಿಂದೆ ಕೋಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮಾರಣಾಂತಿಕ ಹಲ್ಲೆ ಪ್ರಕರಣದಲ್ಲಿ ಆರೋಪ ಸಾಬೀತಾಗಿತ್ತು. 2017ರ ಜುಲೈ 10ರಂದು ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆ ವಿಧಿಸಿತ್ತು.
ಸುಪ್ರೀಂ ಮೆಟ್ಟಿಲು ಹತ್ತಿದ್ದ
ಜೈಲು ಶಿಕ್ಷೆಯಾಗಿದ್ದ ಪ್ರಕರಣದಲ್ಲಿ ಆರೋಪಿ ಹರ್ಷದ್ ಸುಪ್ರೀಂ ಕೋರ್ಟ್ ಮೆಟ್ಟಿಲು ಹತ್ತಿದ್ದ. ಜಾಮೀನು ಪಡೆದುಕೊಂಡಿದ್ದ. ಆ ಬಳಿಕವು ತಮ್ಮ ಕುಕೃತ್ಯಗಳನ್ನು ಮುಂದುವರೆಸಿದ್ದ. ಹಲವು ಅಪರಾಧ ಚಟುವಟಿಕೆಯಲ್ಲಿ ಭಾಗಿಯಾಗಿದ್ದ.
ಪೊಲೀಸರ ಮೇಲೆಯೆ ಚಾಕು ಬೀಸಿದ
ಹರ್ಷದ್, ಚಾಕು ತೋರಿಸಿ ವ್ಯಕ್ತಿಯೊಬ್ಬರಿಗೆ ಹಣ ನೀಡುವಂತೆ ಬೆದರಿಕೆ ಹಾಕಿದ್ದ. ಈ ಸಂಬಂಧ ಜೂನ್ 1ರಂದು ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದರು. ಕಾರ್ಯಾಚರಣೆ ವೇಳೆ ಹರ್ಷದ್ ಪೊಲೀಸರ ಮೇಲೆ ಚಾಕು ಬೀಸಿದ್ದಾನೆ ಎಂದು ಆರೋಪಿಸಲಾಗಿದೆ.
ಆತ್ಮರಕ್ಷಣೆಗೆ ಹಾರಿದ ಗುಂಡು
ಹರ್ಷದ್ ಅಲಿಯಾಸ್ ಜಾಮೂನು ಚಾಕು ಬೀಸಿದ್ದರಿಂದ ಪೊಲೀಸರು ಆತ್ಮರಕ್ಷಣೆಗಾಗಿ ಗುಂಡ ಹಾರಿಸಿದ್ದಾರೆ. ತುಂಗಾ ನಗರ ಠಾಣೆ ಇನ್ಸ್ ಪೆಕ್ಟರ್ ಮಂಜುನಾಥ್ ಅವರು ಗುಂಡು ಹಾರಿಸಿದ್ದು, ಹರ್ಷದ್ ಬಲಗಾಲಿಗೆ ತಗುಲಿದೆ. ಗಾಯಗೊಂಡಿದ್ದ ಆತನನ್ನು ಪೊಲೀಸರೆ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ರೌಡಿ ಕಾಲಿಗೆ ಗುಂಡು ಹೊಡೆದ ಪೊಲೀಸರು
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ಭದ್ರಾವತಿಯ ತರೀಕೆರೆ ರಸ್ತೆಯಲ್ಲಿ ಅಗ್ನಿ ಅವಘಡ, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಆಹುತಿ

- ಕಲ್ಲು ಬಂಡೆ ಬಿದ್ದು ಕೃಷಿಕ ಸ್ಥಳದಲ್ಲೇ ಸಾವು

- ಹೆಗಲತ್ತಿಯಲ್ಲಿ ನಾಗಯಕ್ಷೆ ದೇವಾಲಯದ 12ನೇ ವಾರ್ಷಿಕೋತ್ಸವ, ಇವತ್ತು ಪಲ್ಲಕ್ಕಿ ಉತ್ಸವ

- ಶಿವಮೊಗ್ಗ ಜಿಲ್ಲೆಯಲ್ಲಿ ರಣ ಬಿಸಿಲು, ತಾಪಮಾನ ಹೆಚ್ಚಳ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ಉಷ್ಣಾಂಶ?

- ತುಂಗಾ ಚಾನಲ್ ಬಳಿ ಸ್ಕೂಟಿ ನಿಲ್ಲಿಸಿಕೊಂಡಿದ್ದವರ ಮೇಲೆ ಪೊಲೀಸ್ ದಾಳಿ, ಒಬ್ಬ ಎಸ್ಕೇಪ್, ಮತ್ತೊಬ್ಬ ಅರೆಸ್ಟ್

About The Editor
ನಿತಿನ್ ಆರ್.ಕೈದೊಟ್ಲು





