SHIVAMOGGA LIVE NEWS | 25 DECEMBER 2022
ಭದ್ರಾವತಿ : ಬಾಲಕನ ಅಪಹರಣ (kidnap case) ಮಾಡಿ ಪೋಷಕರಿಗೆ ಹಣದ ಬೇಡಿಕೆ ಇಟ್ಟಿದ್ದ ಗ್ಯಾಂಗ್ ಒಂದನ್ನು ಭದ್ರಾವತಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಭದ್ರಾವತಿಯ ಬೊಮ್ಮನಕಟ್ಟೆ ನಿವಾಸಿ ಮಹಮದ್ ಅಜರ್ ಎಂಬುವವರ 16 ವರ್ಷದ ಮಗನ ಕಿಡ್ನಾಪ್ (kidnap case) ಮಾಡಲಾಗಿತ್ತು. ಡಿ.22ರಂದು ರಾತ್ರಿ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಬಾಲಕನ ಅಪಹರಣ ಮಾಡಿದ್ದರು. ಅಲ್ಲದೆ ಹಣಕ್ಕೆ ಬೇಡಿಕೆಯನ್ನು ಇಟ್ಟಿದ್ದರು. ಈ ಸಂಬಂಧ ನ್ಯೂ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ರಾಶಿ ರಾಶಿ ಸೈಲೆನ್ಸರ್ ಗಳನ್ನು ರಸ್ತೆ ಮೇಲಿಟ್ಟು ಬುಲ್ಡೋಜರ್ ಹತ್ತಿಸಿದ ಪೊಲೀಸರು
ತನಿಖೆ ಕೈಗೊಂಡ ನ್ಯೂಟೌನ್ ಠಾಣೆ ಪೊಲೀಸರು ಬಾಲಕನ ಪತ್ತೆ ಮಾಡಿದ್ದಾರೆ. ಅಪಹರಣಕಾರರನ್ನು ಬಂಧಿಸಿದ್ದಾರೆ. ಭದ್ರಾವತಿ ನೆಹರು ನಗರದ ಮುಬಾರಕ್ ಅಲಿಯಾಸ್ ಡಿಚ್ಚಿ (24), ಸಾಗರದ ಜಾಬೀರ್ ಬಾಷಾ ಅಲಿಯಾಸ್ ರಾಬರ್ಟ್ (22), ಶಿವಮೊಗ್ಗ ಟಿಪ್ಪುನಗರದ ಮುಸ್ತಫಾ (26), ಸಾಗರ ನೂರುಲ್ ಹುದಾ ಮಸೀದಿ ಸಮೀಪದ ಅಡಕೆ ವ್ಯಾಪಾರಿ ಅಬ್ದುಲ್ ಸಲಾಂ (26), ಸಾಗರ ಅಣಲೆಕೊಪ್ಪದ ಇರ್ಫಾನ್ (31) ಬಂಧಿತರು. ಇವರಿಂದ ಒಂದು ಕಾರನ್ನು ವಶಕ್ಕೆ ಪಡೆಯಲಾಗಿದೆ.
ಭದ್ರಾವತಿ ಎ.ಎಸ್.ಪಿ ಜಿತೇಂದ್ರ ದಯಾಮ, ಸಿಪಿಐ ರಾಘವೇಂದ್ರ ಕಾಂಡಿಕೆ ಅವರ ನೇತೃತ್ವದಲ್ಲಿ, ನ್ಯೂಟೌನ್ ಪೊಲೀಸ್ ಠಾಣೆ ಪಿಎಸ್ಐ ರಂಗನಾಥ ಅಂತರಗಟ್ಟಿ, ಸಿಬ್ಬಂದಿ ಎ.ಎಸ್.ಐ ವೇಂಕಟೇಶ, ರಾಘವೇಂದ್ರ, ಶ್ಯಾಮಕುಮಾರ, ಶ್ರೀಧರ, ರೂಪೇಶ, ಹಾಲಪ್ಪ, ಮೌನೇಶ, ಪೈರೋಜ್, ಸುನೀಲ್ ಕುಮಾರ, ತೀರ್ಥಲಿಂಗಪ್ಪ ಅವರ ತಂಡ ಆರೋಪಿಗಳನ್ನು ಬಂಧಿಸಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200