ಶಿವಮೊಗ್ಗ ಲೈವ್.ಕಾಂ | SHIMOGA NEWS | 29 ಸೆಪ್ಟೆಂಬರ್ 2021
ತೋಟವೊಂದರಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ್ದ ಲಕ್ಷಾಂತರ ಮೌಲ್ಯದ ಸಾಗುವಾನಿ ನಾಟಾ ವಶಕ್ಕೆ ಪಡೆಯಲಾಗಿದೆ. ಖಚಿತ ಮಾಹಿತಿ ಮೇರೆಗ ದಾಳಿ ನಡೆಸಿದ ಅರಣ್ಯಾ ಇಲಾಖೆ ಅಧಿಕಾರಿಗಳು ನಾಟಾ ವಶಪಡಿಸಿಕೊಂಡಿದ್ದಾರೆ.
ಭದ್ರಾವತಿ ತಾಲೂಕು ಹುಣಸೆಕಟ್ಟೆ ಗ್ರಾಮದಲ್ಲಿ ದಾಳಿ ನಡೆದಿದೆ. ಜಾನಪ್ಪ ಬೈರು ಎಂಬುವವರ ತೋಟದಲ್ಲಿ ಸಾಗುವಾನಿ ನಾಟಗಳಿರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಇವತ್ತು ಪರಿಶೀಲನೆ ನಡೆಸಿದಾಗ ನಾಟಾ ಪತ್ತೆಯಾಗಿದೆ.
ಎಷ್ಟಿತ್ತು ನಾಟಾ? ಮೌಲ್ಯವೆಷ್ಟು?
ಉಂಬ್ಳೆಬೈಲು ವಲಯ ಅರಣ್ಯಾಧಿಕಾರಿಗಳು ದಾಳಿ ನಡೆಸಿ 14 ಸಾಗುವಾನಿ ನಾಟಾ ವಶಪಡಿಸಿಕೊಂಡಿದ್ದಾರೆ. ಇದಕ್ಕೆ ಎರಡು ಲಕ್ಷ ರೂ. ಮೌಲ್ಯಿಇರಬಹುದು ಎಂದು ಅಂದಾಜಿಸಲಾಗಿದೆ.
ಅಕ್ರಮವಾಗಿ ನಾಟಾ ದಾಸ್ತಾನು ಮಾಡಿಕೊಂಡಿದ್ದ ಆರೋಪ ಸಂಬಂಧ ತೋಟದ ಮಾಲೀಕ ಜಾನಪ್ಪ ಬೈರು ಮತ್ತು ಅವರ ಮಗ ಜಗದೀಶ್ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ.
ವಲಯ ಅರಣ್ಯಾಧಿಕಾರಿ ಆರ್.ಟಿ.ಮಂಜುನಾಥ್, ಡಿವೈಆರ್’ಎಫ್ಓ ಅಬ್ದುಲ್ ಕರೀಂ, ಪವನ್, ಗಿರಿಸ್ವಾಮಿ, ಫಾರೆಸ್ಟ್ ಗಾರ್ಡ್ ಸುನಿಲ್, ಸೂರ್ಯವಂಶಿ ದಾಳಿಯಲ್ಲಿ ಪಾಲ್ಗೊಂಡಿದ್ದರು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200