SHIVAMOGGA LIVE NEWS | 14 NOVEMBER 2023
SHIMOGA : ದರೋಡೆಗೆ ಹೊಂಚು ಹಾಕಿದ್ದವರನ್ನು ಬಂಧಿಸಿರುವ ದೊಡ್ಡಪೇಟೆ ಪೊಲೀಸರು, ಸ್ಟೀಲ್ ಡ್ರ್ಯಾಗರ್, ಕಬ್ಬಿಣದ ರಾಡು ಹಾಗೂ ಲಾಂಗ್ ಅನ್ನು ವಶಪಡಿಸಿಕೊಂಡಿದ್ದಾರೆ. ದಾಳಿ ವೇಳೆ ಒಬ್ಬ ಪರಾರಿಯಾಗಿದ್ದಾನೆ.
ಕೋಟೆಗಂಗೂರಿನ ಸಾಗರ್ ಅಲಿಯಾಸ್ ಶಬರೀಶ್ (22), ರಾಗಿಗುಡ್ಡದ ಶೇಯಸ್ (22), ಭದ್ರಾವತಿ ತಾಲೂಕಿನ ಬಾಬಳ್ಳಿಯ ದೇವರಾಜ್ (31), ಭದ್ರಾವತಿ ಎಪಿಎಂಸಿಯ ಅಡಕೆ ಮಂಡಿ ಕೆಲಸಗಾರ ನಾಗರಾಜ್ ಅಲಿಯಾಸ್ ಕುಮಾರ್ (38) ಬಂಧಿತರು. ಕೋಟೆಗಂಗೂರಿನ ಸಂತೋಷ್ ಪರಾರಿಯಾಗಿದ್ದಾನೆ.
ನಗರದ ಎನ್ಟಿ ರಸ್ತೆಯ ಫಲಕ್ ಶಾದಿ ಮಹಲ್ ಪಕ್ಕದ ಖಾಲಿ ಜಾಗಕ್ಕೆ ಹೊಂದಿಕೊಂಡಿರುವ ರಸ್ತೆಯಲ್ಲಿ ಈ ಗ್ಯಾಂಗ್ ದರೋಡೆಗೆ ಹೊಂಚು ಹಾಕಿತ್ತು. ರಸ್ತೆಯಲ್ಲಿ ಓಡಾಡುವ ಜನರು ಮತ್ತು ವಾಹನಗಳನ್ನು ತಡೆದು ಅವರ ಬಳಿ ಇರುವ ನಗದು, ಚಿನ್ನಾಭರಣ ಕಿತ್ತುಕೊಳ್ಳಲು ಹೊಂಚು ಹಾಕಿದ್ದರು. ಖಚಿತ ಮಾಹಿತಿ ಮೇರೆಗೆ ಪಿಎಸ್ಐ ವಸಂತ್ ನೇತೃತ್ವದಲ್ಲಿ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಕಬ್ಬಿಣದ ರಾಡು, ಮಚ್ಚು, 50 ಗ್ರಾಂ ತೂಕದ ಖಾರದ ಪುಡಿ, ಸ್ಟೀಲ್ ಡ್ಯಾಗರ್ಗಳನ್ನು ವಶಕ್ಕೆ ಪಡೆಯಲಾಗಿದೆ.
ಇದನ್ನೂ ಓದಿ – ಗಾಜನೂರಿನಲ್ಲಿ ಕಿಂಗ್ ಫಿಶರ್ ಬಿಯರ್ಗಾಗಿ ಮದ್ಯದಂಗಡಿ ಬಾಗಿಲು ಮುರಿದ ಕಳ್ಳರು
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200