ಓಮ್ನಿ ಕಾರು ಅಡ್ಡಗಟ್ಟಿ ಲಕ್ಷ ಲಕ್ಷದ ಗುಜರಿ ವಸ್ತು ದರೋಡೆ, ನಾಲ್ವರು ಅರೆಸ್ಟ್‌, ಏನಿದು ಕೇಸ್‌?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಭದ್ರಾವತಿ : ಕಾರು ಅಡ್ಡಗಟ್ಟಿ 3.50 ಲಕ್ಷ ರೂ. ಮೌಲ್ಯದ ತಾಮ್ರ ಮತ್ತು ಹಿತ್ತಾಳೆಯ ಗುಜರಿ (Scrap) ವಸ್ತುಗಳನ್ನು ದರೋಡೆ ಮಾಡಿದ್ದ ಆರೋಪಿಗಳನ್ನು ಭದ್ರಾವತಿ ಪೊಲೀಸರು ಬಂಧಿಸಿದ್ದಾರೆ. ಇವರಿಂದ ಗುಜರಿ ವಸ್ತುಗಳು ಸೇರಿ ಒಟ್ಟು 7.35 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಇದನ್ನೂ ಓದಿ » ಕೆಎಫ್‌ಡಿ ಸೋಂಕು, ತೀರ್ಥಹಳ್ಳಿಯ ಬಾಲಕ ಮಣಿಪಾಲದಲ್ಲಿ ಸಾವು

ಭದ್ರಾವತಿ ಹೊಸಮನೆಯ ಭೋವಿ ಕಾಲೋನಿಯ ಕವಿರಾಜ್‌ (21), ಶಿವಮೊಗ್ಗದ ಮೇಲಿನ ತುಂಗಾನಗರದ ಮುಬಾರಕ್‌ (24), ಭದ್ರಾವತಿ ಬಾರಂದೂರಿನ ಅಜಿತ್‌ ಅಲಿಯಾಸ್‌ ಘಟ್ಟ (19), ಕಬಳಿಕಟ್ಟೆಯ ಮಂಜುನಾಥ್‌ ಅಲಿಯಾಸ್‌ ಮಂಜು (21) ಬಂಧಿತರು.

ಕಾರು ಅಡ್ಡಗಟ್ಟಿ, ಗುಜರಿ ವಸ್ತು ದರೋಡೆ

ಶಿವಮೊಗ್ಗದ ಆರ್‌.ಎಂ.ಎಲ್‌ ನಗರದ ಕಾರ್ತಿಕ್‌ ಓಮ್ನಿ ಕಾರಿನಲ್ಲಿ 3.50 ಲಕ್ಷ ರೂ. ಮೌಲ್ಯದ ಹಿತ್ತಾಳೆ ಮತ್ತು ತಾಮ್ರದ ಗುಜರಿ (Scrap)  ವಸ್ತುಗಳನ್ನು ಕೊಂಡೊಯ್ಯುತ್ತಿದ್ದರು. ಮಾ.25ರಂದು ಬೆಳಗ್ಗೆ 6.30ರ ಹೊತ್ತಿಗೆ ಭದ್ರಾವತಿಯ ರಾಮಿನಕೊಪ್ಪದಲ್ಲಿ ಓಮ್ನಿ ಕಾರನ್ನು ಅಡ್ಡಗಟ್ಟಿದ ನಾಲ್ವರು, ಗುಜರಿ ವಸ್ತುಗಳನ್ನು ದರೋಡೆ ಮಾಡಿದ್ದರು. ಈ ಸಂಬಂಧ ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Scrap-theft-case-four-arrested-by-bhadravathi-police

ತನಿಖೆ ನಡೆಸಿದ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. 700 ಕೆ.ಜಿ ತೂಕದ ಹಿತ್ತಾಳೆ ಮತ್ತು ತಾಮ್ರದ ಗುಜರಿ ವಸ್ತುಗಳು, ಕೃತ್ಯಕ್ಕೆ ಬಳಸಿದ ಟಾಟಾ ಏಸ್‌ ವಾಹನ, ಒಂದು ಪಲ್ಸರ್‌ ಬೈಕ್‌ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಭದ್ರಾವತಿ ಡಿವೈಎಸ್‌ಪಿ ನಾಗರಾಜ್‌ ಮೇಲ್ವಿಚಾರಣೆಯಲ್ಲಿ, ಭದ್ರಾವತಿ ಗ್ರಾಮಾಂತರ ಠಾಣೆ ಇನ್ಸ್‌ಪೆಕ್ಟರ್‌ ಜಗದೀಶ ಹಂಚಿನಾಳ್‌, ಪಿಎಸ್‌ಐ ಶ್ರೀಶೈಲಕೆಂಚಣ್ಣವರ ನೇತೃತ್ವದಲ್ಲಿ, ಸಿಬ್ಬಂದಿ ಚಂದ್ರಶೇಖರ್, ದಿವಾಕರ್ ರಾವ್, ಮಂಜುನಾಥ, ಈರಯ್ಯ, ರೇವಣ ಸಿದ್ದಪ್ಪ, ವಿಜಯ್ ಕುಮಾರ್ ಹಾಗೂ ಸಂತೋಷ ಕುಮಾರ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment