ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 09 JANUARY 2021
ಮೆಡಿಕಲ್ ಸೀಟ್ ಕೊಡಿಸುವುದಾಗಿ ನಂಬಿಸಿ, ಒಂದು ಲಕ್ಷ ರೂ. ಹಣ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಭದ್ರಾವತಿಯ ಓಲ್ಡ್ ಟೌನ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಏನಿದು ಕೇಸ್?
ಕೋಲ್ಕತ್ತಾ ಮೂಲದ ವ್ಯಕ್ತಿಯೊಬ್ಬ, ಭದ್ರಾವತಿಯ ಭೂತನಗುಡಿ ನಿವಾಸಿ ರಫಿಕ್ ಅಹಮದ್ ಎಂಬುವವರ ಮಗನಿಗೆ, ಮೆಡಿಕಲ್ ಕಾಲೇಜಿನಲ್ಲಿ ಸರ್ಕಾರಿ ಸೀಟ್ ಕೊಡಿಸುವುದಾಗಿ ನಂಬಿಸಿದ್ದ. ಇದಕ್ಕೆ ಆರು ಲಕ್ಷ ರೂ. ನೀಡಬೇಕು ಎಂದು ಹೇಳಿದ್ದ. ಮುಂಗಡವಾಗಿ ಒಂದು ಲಕ್ಷ ರುಪಾಯಿಯನ್ನು ತನ್ನ ಖಾತೆಗೆ ಹಾಕುವಂತೆ ತಿಳಿಸಿ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಕೋಲ್ಕತ್ತಾ ಬ್ರಾಂಚ್ನ ಖಾತೆ ವಿವರ ಒದಗಿಸಿದ್ದ.
ಹಣ ಹೋಯ್ತು, ವ್ಯಕ್ತಿ ನಾಪತ್ತೆ
ಹಣ ಪಡೆದ ಕೋಲ್ಕತ್ತಾದ ರಿತೇಷ್ ಅಗರ್ವಾಲ್ ಎಂಬಾತ, ಕೊನೆಗೆ ರಫಿಕ್ ಅಹಮದ್ ಅವರ ಕರೆ ಸ್ವೀಕರಿಸುತ್ತಿಲ್ಲ. ಇದರಿಂದ ಆತಂಕಗೊಂಡ ರಫಿಕ್ ಅಹಮದ್ ಅವರು ದೂರು ನೀಡಿದ್ದಾರೆ.
ಭದ್ರಾವತಿ ಓಲ್ಡ್ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು






