ಶಿವಮೊಗ್ಗ: ಸೋಗಾನೆಯ ಕೇಂದ್ರ ಕಾರಾಗೃಹಕ್ಕೆ ಹೊರಗಿನಿಂದ ಗಾಂಜಾ ಪ್ಯಾಕೆಟ್ (mobile phone) ಎಸೆಯಲಾಗಿತ್ತು. ಅವುಗಳನ್ನು ಅಕ್ರಮವಾಗಿ ಪಡೆದಿದ್ದ ಇಬ್ಬರು ವಿಚಾರಣಾಧೀನ ಕೈದಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಜೈಲಿನ ಭದ್ರತಾ ಸಿಬ್ಬಂದಿ ನಡೆಸಿದ ಹಠಾತ್ ತಪಾಸಣೆ ವೇಳೆ ಈ ಅಕ್ರಮ ಬಯಲಾಗಿದೆ.
ಫೆಬ್ರವರಿ 1ರ ಬೆಳಗ್ಗೆ ಕಾರಾಗೃಹದ ಸಿಬ್ಬಂದಿ ಮತ್ತು ಕೆ.ಎಸ್.ಐ.ಎಸ್.ಎಫ್ ಸಿಬ್ಬಂದಿ ಗಸ್ತಿನಲ್ಲಿದ್ದಾಗ, ಜೈಲಿನ ಆವರಣದೊಳಗೆ ಹೊರಗಿನಿಂದ ಪೊಟ್ಟಣಗಳನ್ನು ಎಸೆಯುತ್ತಿರುವುದು ಗಮನಕ್ಕೆ ಬಂದಿದೆ. ಒಳಗೆ ಪರಿಶೀಲನೆ ನಡೆಸಿದಾಗ ಪೊಟ್ಟಣಗಳನ್ನು ಹೊಂದಿದ್ದ ವಿಚಾರಣಾಧೀನ ಕೈದಿಗಳಾದ ಮೊಹ್ಮದ ಖಲಂದರ್ ಮತ್ತು ಅಬ್ದುಲ್ ಆಸೀಫ್ ಸಿಕ್ಕಿಬಿದ್ದಿದ್ದಾರೆ.
ಇವರಿಂದ ಒಂದು ಸಣ್ಣ ಕೀಪ್ಯಾಡ್ ಮೊಬೈಲ್ ಫೋನ್ ಮತ್ತು ಸಣ್ಣ ಪೊಟ್ಟಣಗಳಲ್ಲಿದ್ದ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ