
ಶಿವಮೊಗ್ಗ ಲೈವ್.ಕಾಂ | SHIMOGA NEWS | 8 NOVEMBER 2020
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಟಿಪ್ಪು ನಗರದಲ್ಲಿ ಬೈಕ್ ನಿಲ್ಲಿಸಿಕೊಂಡು ಗಾಂಜಾ ಮಾರುತ್ತಿದ್ದವರ ಮೇಲೆ ತುಂಗಾನಗರ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ. ಇಬ್ಬರನ್ನು ಬಂಧಿಸಿದ್ದು, ಗಾಂಜಾ ಮತ್ತು ಬೈಕನ್ನು ವಶಕ್ಕೆ ಪಡೆಯಲಾಗಿದೆ.
ಟಿಪ್ಪುನಗರದ ಅಯೂಬ್ ಖಾನ್ ಅಲಿಯಾಸ್ ಅಯೂಬ್ ಟ್ಯೂಬ್ (21), ಕೆಳಗಿನ ತುಂಗಾನಗರದ ಸಲ್ಮಾನ್ ಅಲಿಯಾಸ್ ನೇಪಾಳಿ ಸಲ್ಮಾನ್ (20) ಬಂಧಿತರು. ಟಿಪ್ಪುನಗರದಲ್ಲಿ ಇವರು ಗಾಂಜಾ ಮಾರುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು.

ಬಂಧಿತರಿಂದ 100 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ. 80 ಸಾವಿರ ಮೌಲ್ಯದ ದ್ವಿಚಕ್ರ ವಾಹನವನ್ನು ಜಪ್ತಿ ಮಾಡಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ತುಂಗಾನಗರ ಠಾಣೆ ಪಿಎಸ್ಐ ತಿರುಮಲೇಶ್ ನೇತೃತ್ವದಲ್ಲಿ ಎಎಸ್ಐ ನಾರಾಯಣನ್, ಮುಖ್ಯ ಪೇದೆಗಳಾದ ಸಂತೋಷ್, ಸೈಯದ್ ಇಮ್ರಾನ್, ಕಾನ್ಸ್ಟೇಬಲ್ಗಳಾದ ಅರುಣ್, ಲಂಕೇಶ್, ಗುರುನಾಯ್ಕ್, ರಾಜು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






