SHIVAMOGGA LIVE NEWS | 23 NOVEMBER 2023
AYANUR : ಪಂಜಾಬ್ಗೆ 180 ಕ್ವಿಂಟಾಲ್ ಶುಂಠಿ ತುಂಬಿಕೊಂಡು ಹೊರಟ ಲಾರಿ ನಿಗದಿತ ಸ್ಥಳ ತಲುಪದೆ ನಾಪತ್ತೆಯಾಗಿದೆ. ಲಾರಿ ಚಾಲಕ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದಾನೆ. ಆಯನೂರಿನ ಶುಂಟಿ ವ್ಯಾಪಾರಿಗೆ ನಷ್ಟವಾಗಿದ್ದು ಕುಂಸಿ ಠಾಣೆಯಲ್ಲಿ ದೂರು ನೀಡಿದ್ದಾರೆ.
ಆಯನೂರು TO ಪಂಜಾಬ್ಗೆ ಲಾರಿ
ಸಯ್ಯದ್ ಸಾದಿಕ್ ಎಂಬುವವರು ಕಳೆದ 8 ವರ್ಷದಿಂದ ಸುತ್ತಮುತ್ತಲ ರೈತರಿಂದ ಶುಂಠಿ ಖರೀದಿಸಿ ವ್ಯಾಪಾರ ಮಾಡುತ್ತಿದ್ದಾರೆ. ನ.18ರಂದು ಆಯನೂರಿನಿಂದ 180 ಕ್ವಿಂಟಾಲ್ ಶುಂಠಿಯನ್ನು ಲಾರಿಯಲ್ಲಿ ಪಂಜಾಬ್ಗೆ ರವಾನಿಸಿದ್ದರು. ನ.21ರ ರಾತ್ರಿ ಪಂಜಾಬ್ನ ಅಮೃತಸರಕ್ಕೆ ಲಾರಿ ತಲುಪಬೇಕಿತ್ತು. ಆದರೆ ನ.21ರ ಬೆಳಗ್ಗೆಯಿಂದ ಲಾರಿ ಚಾಲಕನ ಮೊಬೈಲ್ ಸ್ವಿಚ್ ಆಫ್ ಆಗಿದೆ.
ವಾಟ್ಸಪ್ ಗ್ರೂಪ್ನಲ್ಲಿ ಆಘಾತಕಾರಿ ಮೆಸೇಜ್
ಈ ಮಧ್ಯೆ ಮಧ್ಯಪ್ರದೇಶದ ಝಾನ್ಸಿಯಲ್ಲಿ ಕರ್ನಾಟಕದ ಲಾರಿಯೊಂದರಲ್ಲಿ ಶುಂಠಿ ಮಾರಾಟ ಮಾಡಲಾಗುತ್ತಿದೆ. ಪ್ರತಿ ಕೆ.ಜಿ. 50 ರೂ. ನಂತೆ ಮಾರಾಟ ಮಾಡುತ್ತಿರುವುದಾಗಿ ಶುಂಠಿ ಬೆಳೆಗಾರರು ಮತ್ತು ವರ್ತಕರ ಸಂಘದ ವಾಟ್ಸಪ್ ಗ್ರೂಪ್ನಲ್ಲಿ ಮೆಸೇಜ್ ಬಂದಿತ್ತು. ವಿಚಲಿತರಾದ ವರ್ತಕ ಸಯ್ಯದ್ ಸಾದಿಕ್ ಅಮೃತಸರದಲ್ಲಿರುವ ಟ್ರಾನ್ಸ್ಪೋರ್ಟ್ ಕಚೇರಿಗೆ ಕರೆ ಮಾಡಿ ವಿಚಾರಿಸಿದ್ದು ಲಾರಿ ತಲುಪಿಲ್ಲ ಎಂದು ತಿಳಿಸಿದ್ದರು.
ಲಾರಿ ಚಾಲಕ ಮೋಹನ್ ಸೇರಿದಂತೆ ಇಬ್ಬರ ವಿರುದ್ಧ ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಂದಾಜು 13.77 ಲಕ್ಷ ರೂ. ಮೌಲ್ಯದ 180 ಕ್ವಿಂಟಾಲ್ ಶುಂಠಿ ಪತ್ತೆ ಹಚ್ಚಿಕೊಡುವಂತೆ ಸಯ್ಯದ್ ಸದಾಕ್ ದೂರಿನಲ್ಲಿ ಮನವಿ ಮಾಡಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣ ಕಾಂಪೌಂಡ್ ವಿಚಾರಕ್ಕೆ ಪ್ರತಿಭಟನೆ, ಪೊಲೀಸರ ಜೊತೆ ಮಾತಿಗೆ ಮಾತು, ಕಾರಣವೇನು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200