SHIVAMOGGA LIVE NEWS | 9 MAY 2024
THIRTHAHALLI : ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಲಕ್ಷಾಂತರ ಮೌಲ್ಯದ ವಸ್ತುಗಳು ಸಟ್ಟು ಕರಕಲಾಗಿವೆ. ತೀರ್ಥಹಳ್ಳಿ ತಾಲೂಕು ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಿಣಿಯ ಗ್ರಾಮದಲ್ಲಿ ಘಟನೆ ಸಂಭವಿಸಿದೆ.
ಗುರುಮೂರ್ತಿ ಎಂಬುವವರ ಮನೆಗೆ ಬೆಂಕಿ ತಗುಲಿತ್ತು. ವಿಷಯ ತಿಳಿದು ತೀರ್ಥಹಳ್ಳಿ ಮತ್ತು ಕೊಪ್ಪದಿಂದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದರು.
ಲಕ್ಷ ಲಕ್ಷ ಮೌಲ್ಯದ ವಸ್ತು ಭಸ್ಮ
ಮನೆಯಲ್ಲಿ ಇಟ್ಟಿದ್ದ ಅಡಿಕೆ, ಕಾಳುಮೆಣಸು, ಭತ್ತದ ಮೂಟೆ, ಒಂದು ಬೈಕ್, ಕೊಟ್ಟಿಗೆ, ಒಂದು ಎಕರೆ ತೋಟಕ್ಕೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ. ಲಕ್ಷಾಂತಗರ ರೂ. ನಷ್ಟ ಸಂಭವಿಸಿದೆ ಎನ್ನಲಾಗಿದೆ. ಸ್ಥಳಕ್ಕೆ ಶಾಸಕ ಆರಗ ಜ್ಞಾನೇಂದ್ರ ಭೇಟಿ ನೀಡಿದ್ದರು.
ಇದನ್ನೂ ಓದಿ – ಶಿವಮೊಗ್ಗ ರಸ್ತೆ ಪಕ್ಕದ ಜಮೀನಿಗೆ ಪಲ್ಟಿಯಾದ ಬಸ್, ಅದೃಷ್ಟವಶಾತ್ ತಪ್ಪಿತು ದೊಡ್ಡ ದುರಂತ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200