ಶಿವಮೊಗ್ಗ: ನಡೆದು ಹೋಗುತ್ತಿದ್ದ ಮಹಿಳೆಯ ಕೊರಳಲ್ಲಿ ಇದ್ದ ಚಿನ್ನದ ಸರವನ್ನು (Chain) ವ್ಯಕ್ತಿಯೊಬ್ಬ ಕಸಿದುಕೊಂಡು ಪರಾರಿಯಾಗಿದ್ದಾನೆ. ಶಿವಮೊಗ್ಗ ನಗರದ ಕುಂಬಾರಗುಂಡಿಯಲ್ಲಿ ಘಟನೆ ಸಂಭವಿಸಿದೆ.
ಬಿ.ಬಿ.ಸ್ಟ್ರೀಟ್ ನಿವಾಸಿ ಪುಷ್ಪಲತಾ ಅವರು ರಾತ್ರಿ 9 ಗಂಟೆ ಹೊತ್ತಿಗೆ ಗಾಂಧಿ ಬಜಾರ್ನಲ್ಲಿರುವ ಸಹೋದರನ ಮನೆಗೆ ನಡೆದು ಹೋಗುತ್ತಿದ್ದರು. ಕುಂಬಾರಗುಂಡಿಯಲ್ಲಿ ಸ್ವಲ್ಪ ಕತ್ತಲು ಇರುವ ಜಾಗದಲ್ಲಿ ಪುಷ್ಪಲತಾ ತೆರಳುವಾಗ ವ್ಯಕ್ತಿಯೊಬ್ಬ ಅವರ ಬಳಿ ಬಂದು ಕೊರಳಲ್ಲಿದ್ದ ಚಿನ್ನದ ಸರ ಕಸಿದುಕೊಂಡು ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ.
₹1.15 ಲಕ್ಷ ಮೌಲ್ಯದ 12.800 ಗ್ರಾಂ ತೂಕದ ಚಿನ್ನದ ಸರ ಕಳುವಾಗಿದೆ ಎಂದು ಆರೋಪಿಸಿ ದೂರು ನೀಡಿದ್ದಾರೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಕಾಂತಾರಾ ಶೂಟಿಂಗ್ ವೇಳೆ ಅವಘಡ, ನಾಳೆ ನೊಟೀಸ್ ಜಾರಿ, ಈತನಕ ಏನೇನಾಯ್ತು?

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200