SHIVAMOGGA LIVE NEWS | 18 APRIL 2024
SAGARA : ನಡೆದು ಹೋಗುತ್ತಿದ್ದ ವೃದ್ಧೆಯೊಬ್ಬರ ಬಳಿ ಬೈಕ್ನಲ್ಲಿ ಬಂದ ಅಪರಿಚಿತರು ವಿಳಾಸ ಕೇಳುವಂತೆ ನಟಿಸಿ ಮಾಂಗಲ್ಯ ಸರ ಅಪಹರಿಸಿದ್ದಾರೆ. ಸಾಗರದ ಅಣಲೆಕೊಪ್ಪ ಬಡಾವಣೆಯ ರಾಬಿಯಾ ಮಸೀದಿ ಬಳಿ ಘಟನೆ ನಡೆದಿದೆ.
ಅಪರಿಚಿತರು ಶಿರವಾಳ ಗ್ರಾಮದ ಕಡೆಯಿಂದ ಬೈಕ್ನಲ್ಲಿ ಬಂದಿದ್ದರು. ವಿಳಾಸ ಕೇಳುವ ನೆಪದಲ್ಲಿ ಶಾಂತಮ್ಮ ಎಂಬುವರ ಮಾಂಗಲ್ಯ ಸರ ಕೀಳಲು ಮುಂದಾಗಿದ್ದಾರೆ. ಶಾಂತಮ್ಮ ಪ್ರತಿರೋಧ ವ್ಯಕ್ತಪಡಿಸಿದಾಗ 40 ಗ್ರಾಂ ತೂಕದ ಮಾಂಗಲ್ಯ ಸರದ ಪೈಕಿ 23 ಗ್ರಾಂ ಸರದ ತುಂಡನ್ನು ಕಳ್ಳರು ಎಗರಿಸಿದ್ದಾರೆ. ಸಾಗರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಸಾಗರದಲ್ಲಿ ಆಟವಾಡುತ್ತ ಆಯಾತಪ್ಪಿ ಬಾವಿಗೆ ಬಿದ್ದ ಮಗು, ಸಾವು
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200