ಶಿವಮೊಗ್ಗದಲ್ಲಿ ರಂಗೋಲೆ ಹಾಕುತ್ತಿದ್ದ ಮಹಿಳೆ ಚಿನ್ನದ ಸರ ಅಪಹರಣ, ಆಗಿದ್ದೇನು?

Published On: 27 October 2025 | Monday

ಶಿವಮೊಗ್ಗ: ಮನೆ ಮುಂದೆ ರಂಗೋಲೆ ಹಾಕುವಾಗ ಕಳ್ಳನೊಬ್ಬ ಮಹಿಳೆಯೊಬ್ಬರ ಚಿನ್ನದ ಸರ (Gold Chain) ಕಸಿದು ಪರಾರಿಯಾಗಿದ್ದಾನೆ. ಆಲ್ಕೊಳದ ಮಂಗಳ ಮಂದಿರ ಸಮೀಪದ ಮನೆಯೊಂದರ ಮುಂದೆ ಘಟನೆ ಸಂಭವಿಸಿದೆ.

ಅನಸೂಯಮ್ಮ ಎಂಬುವವರು ಮನೆ ಮುಂದೆ ರಂಗೋಲೆ ಹಾಕುತ್ತಿದ್ದಾಗ ಬೈಕಿನಲ್ಲಿ ಬಂದ ವ್ಯಕ್ತಿಯೊಬ್ಬ ಮನೆ ಖಾಲಿ ಇದೆಯಾ ಎಂದು ವಿಚಾರಿಸಿದ್ದ. ನಂತರ ನೀರು ತರಿಸಿಕೊಂಡು ಕುಡಿದ ಆತ ಲೋಟ ಹಿಂತಿರುಗಿಸುವಂತೆ ಮಾಡಿ, ಮಹಿಳೆಯ ಕೊರಳಲ್ಲಿದ್ದ ಚಿನ್ನದ ಸರ ಕಸಿದಿದ್ದಾನೆ. ತಾಗು ತಂದಿದ್ದ ಬೈಕ್‌ ಹತ್ತಿ ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ.

₹49,500 ಮೌಲ್ಯದ 10 ಗ್ರಾಂ ತೂಕದ ಚಿನ್ನದ ಸರ ಕಳ್ಳತನವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಘಟನೆ ಸಂಬಂಧ ವಿನೋಬನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Crime-News-General-Image

ಇದನ್ನೂ ಓದಿ » ನೀರಿನ ತೊಟ್ಟಿಯಲ್ಲಿ ಕಾಡು ಕೋಣದ ಮೃತದೇಹ ಪತ್ತೆ

Kalleshwara-Enterprises.webp
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment