ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS, 20 JANUARY 2025
ಶಿವಮೊಗ್ಗ : ಹತ್ತು ದಿನದ ಅಂತರದಲ್ಲಿ ನಗರದ ಎರಡು ಕಲ್ಯಾಣ ಮಂಟಪದಲ್ಲಿ ಮಕ್ಕಳ ಕೊರಳಲಿದ್ದ ಚಿನ್ನದ ಸರ (Gold Chain) ಕಳವು ಮಾಡಲಾಗಿದೆ. ಪೋಷಕರು ಗಮನಿಸಿದಾಗ ಚಿನ್ನದ ಸರ ಇಲ್ಲದಿರುವುದು ಗೊತ್ತಾಗಿದೆ. ಈ ಸಂಬಂಧ ಪ್ರತ್ಯೇಕವಾಗಿ ಪ್ರಕರಣ ದಾಖಲಾಗಿದೆ.
ಡಿ.25ರಂದು ಮದುವೆಗೆ ಸಮಾರಂಭಕ್ಕೆ ಪೋಷಕರ ಜೊತೆಗೆ ಬಂದಿದ್ದ ಬಾಲಕನ ಕೊರಳಲ್ಲಿದ್ದ 9.100 ಗ್ರಾಂ ತೂಕದ ಬಂಗಾರದ ಸರ ನಾಪತ್ತೆಯಾಗಿತ್ತು. ಕಲ್ಯಾಣ ಮಂಟಪದಲ್ಲಿ ಮಕ್ಕಳ ಜೊತೆಗೆ ಬಾಲಕ ಆಟವಾಡುತ್ತಿದ್ದ. ಊಟದ ಸಮಯಕ್ಕೆ ಪೋಷಕರ ಬಳಿ ಬಂದಾಗ ಚಿನ್ನದ ಸರ ಇರಲಿಲ್ಲ ಎಂದು ಆರೋಪಿಸಲಾಗಿದೆ. ತಮ್ಮ ಪುತ್ರನ ಕೊರಳಲ್ಲಿದ್ದ 55 ಸಾವಿರ ರೂ. ಮೌಲ್ಯದ ಚಿನ್ನದ ಸರ ಕಳುವಾಗಿದೆ ಎಂದು ಆರೋಪಿಸಿ ಹೊಸಮನೆ ಶ್ರೀಧರ್ ದೂರು ನೀಡಿದ್ದಾರೆ.ಪ್ರಕರಣ 1
ಸ್ಥಳ : ಈಡಿಗರ ಭವನ, ಶಿವಮೊಗ್ಗ

ಜ.4ರಂದು ನಡೆದ ಮದುವೆ ಸಮಾರಂಭದಲ್ಲಿ 7 ವರ್ಷದ ಬಾಲಕಿ ಕೊರಳಲ್ಲಿದ್ದ 90 ಸಾವಿರ ರೂ. ಮೌಲ್ಯದ ಚಿನ್ನದ ಸರ ಕಳುವಾಗಿದೆ. ಮಕ್ಕಳೊಂದಿಗೆ ಆಟವಾಡುತ್ತಿ ಬಾಲಕಿಯ ಕೂದಲು ಸರಿಪಡಿಸಲು ತಾಯಿ ಹತ್ತಿರ ಕರೆದಾಗ ಪ್ರಕರಣ ಬೆಳಕಿಗೆ ಬಂದಿದೆ. ಇಬ್ಬರು ಮಹಿಳೆಯರು ಬಾಲಕಿಯನ್ನು ಡ್ರೆಸ್ಸಿಂಗ್ ರೂಂಗೆ ಕರೆದೊಯ್ದು ಕೊರಳಲಿದ್ದ ಚಿನ್ನದ ಸರ ಬಿಚ್ಚಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಬಾಲಕಿಯ ತಾಯಿ ನಾಹಿಲಾ ಬಾನು ದೂರು ನೀಡಿದ್ದಾರೆ.ಪ್ರಕರಣ 2
ಸ್ಥಳ : ಕ್ರೌನ್ ಪ್ಯಾಲೇಸ್, ಬೈಪಾಸ್ ರಸ್ತೆ.

ದೊಡ್ಡಪೇಟೆ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಮಲ್ನಾಡ್ ಸ್ಟಾರ್ಟ್ಅಪ್ ಸಮ್ಮೇಳನಕ್ಕೆ ಚಾಲನೆ, ಕೇಂದ್ರ ಸಚಿವರು ಏನೆಲ್ಲ ಹೇಳಿದರು?
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು





