SHIVAMOGGA LIVE NEWS, 3 FEBRUARY 2025
ಶಿವಮೊಗ್ಗ : ಮನೆಯ ಬೀರುವಿನಲ್ಲಿಟ್ಟಿದ್ದ ಚಿನ್ನಾಭರಣ (gold) ನಾಪತ್ತೆಯಾಗಿವೆ ಎಂದು ಆರೋಪಿಸಿ ಅಶೋಕ ನಗರ ನಿವಾಸಿ ಗೀತಾ ಎಂಬುವವರು ದೂರು ನೀಡಿದ್ದಾರೆ. ಗೃಹ ಪ್ರವೇಶ ಸಮಾರಂಭಕ್ಕೆ ತೆರಳಲು ಸಿದ್ಧತೆ ಮಾಡಿಕೊಳ್ಳುವಾಗ ಕಳ್ಳತನ ಬೆಳಕಿಗೆ ಬಂದಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಅಶೋಕ ನಗರದ ಗೀತಾ ಎಂಬುವವರ ಮನೆ ಬೀರುವಿನಲ್ಲಿದ್ದ ಚಿನ್ನಾಭರಣಗಳ ಪೈಕಿ 10 ಗ್ರಾಂ ತೂಕದ ಜುಮುಕಿ ಮತ್ತು 10 ಗ್ರಾಂ ತೂಕದ ಬಂಗಾರದ ಮಾಟಿ ನಾಪತ್ತೆಯಾಗಿವೆ. ಕುಟುಂಬದವರನ್ನು ವಿಚಾರಿಸಿದಾಗ ಯಾರಿಗು ಇದರ ಬಗ್ಗೆ ಮಾಹಿತಿ ಇಲ್ಲ ಎಂದು ತಿಳಿಸಿದ್ದಾಗಿ ಆರೋಪಿಸಲಾಗಿದೆ.
ಜ.18 ರಿಂದ ಜ.24ರವರೆಗೆ ಗೀತಾ ಅವರು ಮನೆಯಲ್ಲಿರಲಿಲ್ಲ. ಆಗ ಕಳ್ಳರು ಒಳನುಗ್ಗಿ 90 ಸಾವಿರ ರೂ. ಮೌಲ್ಯದ ಈ ಚಿನ್ನಾಭರಣ ಕಳ್ಳತನ ಮಾಡಿರುವ ಕುರಿತು ಶಂಕೆ ವ್ಯಕ್ತಪಡಿಸಿದ್ದಾರೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ದಿನ ಭವಿಷ್ಯ | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ ಈ ದಿನ?