SHIVAMOGGA LIVE NEWS, 1 JANUARY 2025
ಶಿವಮೊಗ್ಗ : ಕೆಎಸ್ಆರ್ಟಿಸಿ ಬಸ್ಸುಗಳಲ್ಲಿ ವ್ಯಾನಿಟಿ ಬ್ಯಾಗುಗಳಿಂದ ನಗದು, ಚಿನ್ನಾಭರಣ (Gold) ಕಳ್ಳತನ ಪ್ರಕರಣಗಳು ಮುಂದುವರೆದಿವೆ. ಹರಿಹರದಿಂದ ಶಿವಮೊಗ್ಗಕ್ಕೆ ಬಸ್ಸಿನಲ್ಲಿ ಬಂದಿಳಿದ ಮಹಿಳೆಯ ವ್ಯಾನಿಟಿ ಬ್ಯಾಗ್ನಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳುವಾಗಿದೆ.
ತಸ್ನೀಮ್ ಸುಲ್ತಾನಾ ಎಂಬುವವರು ಹರಿಹರದಿಂದ ಶಿವಮೊಗ್ಗಕ್ಕೆ ಕೆಎಸ್ಆರ್ಟಿಸಿ ಬಸ್ಸಿನಲ್ಲಿ ಬಂದಿದ್ದರು. ಬಸ್ ಇಳಿಯುವಾಗ ಜನ ದಟ್ಟಣೆ ಹೆಚ್ಚಿತ್ತು. ಈ ಸಂದರ್ಭ ತಸ್ನೀಮ್ ಸುಲ್ತಾನಾ ಅವರ ವ್ಯಾನಿಟಿ ವ್ಯಾಗ್ನಿಂದ ಕಳ್ಳತನವಾಗಿದೆ ಎಂದು ಆರೋಪಿಸಲಾಗಿದೆ. ವ್ಯಾನಿಟಿ ಬ್ಯಾಗ್ನಲ್ಲಿದ್ದ 55 ಗ್ರಾಂ ತೂಕದ ಚಿನ್ನದ ಸರ, ಎರಡು ಚಿನ್ನದ ಉಂಗುರ, 7 ಸಾವಿರ ರೂ. ನಗದು, ಎಟಿಎಂ ಕಾರ್ಡ್ ಕಳ್ಳತನವಾಗಿದೆ.
ಒಟ್ಟು 2.24 ಲಕ್ಷ ರೂ. ಮೌಲ್ಯದ ವಸ್ತುಗಳು ಕಳುವಾಗಿದೆ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಕಾರು, ಬೈಕ್ ಅಪಘಾತದ CCTV ದೃಶ್ಯ ಲಭ್ಯ, ಹೇಗಾಯ್ತು ಘಟನೆ? ಏನೇನೆಲ್ಲ ಆಯ್ತು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200