SHIVAMOGGA LIVE NEWS | 22 JUNE 2024
SHIMOGA : APMCಯಲ್ಲಿ ವ್ಯಕ್ತಿಯೊಬ್ಬರನ್ನು ಹೊಡೆದು, ತಳ್ಳಿ, ಆತನ ಬಳಿಯಿದ್ದ ಬೀಗ ಕಸಿದುಕೊಂಡು ವಾಹನ ಹೊತ್ತೊಯ್ಯಲಾಗಿದೆ. ಘಟನೆ ಸಂಬಂಧ ಎನ್.ಆರ್.ಪುರದ ಕುಮಾರ್ ಎಂಬುವವರು ದೂರು ನೀಡಿದ್ದಾರೆ.
ಹೇಗಾಯ್ತು ಘಟನೆ?
ಶಿವಮೊಗ್ಗ ಎಪಿಎಂಸಿಯಲ್ಲಿ ಮಧ್ಯಾಹ್ನದ ವೇಳೆಗೆ ಕುಮಾರ್ ತಮ್ಮ ಗೂಡ್ಸ್ ವಾಹನಕ್ಕೆ ದಿನಸಿ ವಸ್ತುಗಳನ್ನು ಲೋಡ್ ಮಾಡಿಸುತ್ತಿದ್ದರು. ಈ ಸಂದರ್ಭ ಅಪರಿಚಿತರು ಕುಮಾರ್ ಮೇಲೆ ಏಕಾಏಕಿ ದಾಳಿ ನಡೆಸಿ, ಗೂಡ್ಸ್ ವಾಹನದ ಕೀ ಕಸಿದುಕೊಂಡಿದ್ದಾರೆ. ಗೂಡ್ಸ್ ವಾಹನವನ್ನು ಹೊತ್ತೊಯ್ದಿದ್ದಾರೆ ಎಂದು ಆರೋಪಿಸಲಾಗಿದೆ.
ಇದನ್ನೂ ಓದಿ – ರಾತ್ರೋರಾತ್ರಿ ಪೊಲೀಸ್ ಠಾಣೆಗೆ ಬಂದು ಪೊಲೀಸರ ಎದುರಲ್ಲೇ ಬ್ಲೇಡ್ನಲ್ಲಿ ಕೈ ಕೊಯ್ದುಕೊಂಡ ಯುವಕ
ಗೂಡ್ಸ್ ವಾಹನದಲ್ಲಿ 19 ಸಾವಿರ ರೂ. ಮೌಲ್ಯದ 10 ಮೂಟೆ ಸಕ್ಕರೆ, 12 ಸಾವಿರ ರೂ. ಮೌಲ್ಯದ 4 ಮೂಟೆ ಅಕ್ಕಿ, 10 ಸಾವಿರ ರೂ. ಮೌಲ್ಯದ 2 ಮೂಟೆ ಬೇಳೆ ಇತ್ತು ಎಂದು ದೂರಿನಲ್ಲಿ ತಿಳಿಸಲಾಗಿದೆ. ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಡೆಂಗ್ಯುಗೆ ತುತ್ತಾಗಿದ್ದ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಸಾವು
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200