SHIVAMOGGA LIVE NEWS | 22 JUNE 2024
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
SHIMOGA : APMCಯಲ್ಲಿ ವ್ಯಕ್ತಿಯೊಬ್ಬರನ್ನು ಹೊಡೆದು, ತಳ್ಳಿ, ಆತನ ಬಳಿಯಿದ್ದ ಬೀಗ ಕಸಿದುಕೊಂಡು ವಾಹನ ಹೊತ್ತೊಯ್ಯಲಾಗಿದೆ. ಘಟನೆ ಸಂಬಂಧ ಎನ್.ಆರ್.ಪುರದ ಕುಮಾರ್ ಎಂಬುವವರು ದೂರು ನೀಡಿದ್ದಾರೆ.
ಹೇಗಾಯ್ತು ಘಟನೆ?
ಶಿವಮೊಗ್ಗ ಎಪಿಎಂಸಿಯಲ್ಲಿ ಮಧ್ಯಾಹ್ನದ ವೇಳೆಗೆ ಕುಮಾರ್ ತಮ್ಮ ಗೂಡ್ಸ್ ವಾಹನಕ್ಕೆ ದಿನಸಿ ವಸ್ತುಗಳನ್ನು ಲೋಡ್ ಮಾಡಿಸುತ್ತಿದ್ದರು. ಈ ಸಂದರ್ಭ ಅಪರಿಚಿತರು ಕುಮಾರ್ ಮೇಲೆ ಏಕಾಏಕಿ ದಾಳಿ ನಡೆಸಿ, ಗೂಡ್ಸ್ ವಾಹನದ ಕೀ ಕಸಿದುಕೊಂಡಿದ್ದಾರೆ. ಗೂಡ್ಸ್ ವಾಹನವನ್ನು ಹೊತ್ತೊಯ್ದಿದ್ದಾರೆ ಎಂದು ಆರೋಪಿಸಲಾಗಿದೆ.
ಇದನ್ನೂ ಓದಿ – ರಾತ್ರೋರಾತ್ರಿ ಪೊಲೀಸ್ ಠಾಣೆಗೆ ಬಂದು ಪೊಲೀಸರ ಎದುರಲ್ಲೇ ಬ್ಲೇಡ್ನಲ್ಲಿ ಕೈ ಕೊಯ್ದುಕೊಂಡ ಯುವಕ
ಗೂಡ್ಸ್ ವಾಹನದಲ್ಲಿ 19 ಸಾವಿರ ರೂ. ಮೌಲ್ಯದ 10 ಮೂಟೆ ಸಕ್ಕರೆ, 12 ಸಾವಿರ ರೂ. ಮೌಲ್ಯದ 4 ಮೂಟೆ ಅಕ್ಕಿ, 10 ಸಾವಿರ ರೂ. ಮೌಲ್ಯದ 2 ಮೂಟೆ ಬೇಳೆ ಇತ್ತು ಎಂದು ದೂರಿನಲ್ಲಿ ತಿಳಿಸಲಾಗಿದೆ. ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಡೆಂಗ್ಯುಗೆ ತುತ್ತಾಗಿದ್ದ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಸಾವು
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






