SHIVAMOGGA LIVE NEWS | 27 MAY 2024
SHIMOGA : ಜಿಲ್ಲೆಯ ವಿವಿಧೆಡೆ ಅಡಿಕೆ ಬೆಳೆಗಾರರಲ್ಲಿ (Growers) ಆತಂಕ ಸೃಷ್ಟಿಸಿದ್ದ ಖದೀಮರನ್ನು ಪೊಲೀಸರು ಸೆರೆ ಹಿಡಿದಿದ್ದಾರೆ. ರಾತ್ರೋರಾತ್ರಿ ಕ್ವಿಂಟಾಲ್ಗಟ್ಟೆಲೆ ಅಡಿಕೆ ಕಳ್ಳತನ ಮಾಡಿ, ಬೆಳೆಗಾರರ ನಿದ್ರೆ ಕಸಿದಿದ್ದ ಐವರನ್ನು ಬಂಧಿಸಲಾಗಿದೆ. ಇವರಿಂದ 8.19 ಲಕ್ಷ ರೂ. ಮೌಲ್ಯದ ಅಡಿಕೆ ವಶಕ್ಕೆ ಪಡೆಯಲಾಗಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಸಾಗರ ಗ್ರಾಮಾಂತರ, ಆನಂದಪುರ, ಕಾರ್ಗಲ್, ಸೊರಬ ಠಾಣೆಗಳ ಒಟ್ಟು 8 ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ. ಕೆಂಪು ಅಡಿಕೆ, ಬಿಳಿ ಗೋಟು, ಚಾಲಿ, ಸಿಪ್ಪೆ ಗೋಟು ಅಡಿಕೆ ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದರು.
ಶಿಕಾರಿಪುರದ ಸಂಡಾ ಪೋಸ್ಟ್ನ ಹರಗುವಳ್ಳಿಯ ತುಕ್ರಾಜ್, ಹನುಮಂತಪ್ಪ, ರಾಕೇಶ್, ಅಭಿಷೇಕ್, ಶಿವಕುಮಾರ್ ಬಂಧಿತರು. ಅಡಿಕೆ, 50 ಸಾವಿರ ರೂ. ನಗದು, ಟಾಟಾ ಏಸ್, ಮಹೇಂದ್ರ ಪಿಕ್ ಅಪ್ ವಾಹನಗಳು, ಲಾಂಗ್ ಮತ್ತು ಸ್ಟೀಲ್ ರಾಡ್ ವಶಕ್ಕೆ ಪಡೆಯಲಾಗಿದೆ.
ಇದನ್ನೂ ಓದಿ – ಕೋಡೂರಿನಲ್ಲಿ ಮದುವೆ ಮುಗಿಸಿ ಮನೆಗೆ ಮರಳಿದ ಕುಟುಂಬಕ್ಕೆ ಕಾದಿತ್ತು ಶಾಕ್
ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಹೆಚ್ಚುವರಿ ರಕ್ಷಣಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ ಮತ್ತು ಕಾರಿಯಪ್ಪ ಎ.ಜಿ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಡಿವೈಎಸ್ಪಿ ಗೋಪಾಲಕೃಷ್ಣ ನಾಯ್ಕ, ಸಾಗರ ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಮಹಾಬಲೇಶ್ವರ, ಪಿಎಸ್ಐ ಮುಂದಿನಮನಿ, ಸಿಬ್ಬಂದಿ ಸನಾವುಲ್ಲಾ, ಷೇಖ್ ಫೈರೋಜ್ ಅಹಮದ್, ರವಿಕುಮಾರ್, ಪ್ರವೀಣ್ ಕುಮಾರ್, ಗುರುಬಸವರಾಜ್, ಚಾಲಕ ಗಿರೀಶ್ ಬಾಬು, ಜಿಲ್ಲಾ ಪೊಲೀಸ್ ಕಚೇರಿಯ ತಾಂತ್ರಿಕ ಸಿಬ್ಬಂದಿ ಗುರುರಾಜ್, ಇಂದ್ರೇಶ್, ವಿಜಯ್ ಕುಮಾರ್ ಅವರ ತಂಡ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200