Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ನಡು ಬೀದಿಯಲ್ಲಿ ಕೊಲೆ, ಸಿಸಿಟಿವಿ ವಿಡಿಯೋ ವೈರಲ್, ಯಾರಿದು ಹಂದಿ ಅಣ್ಣಿ? ಹೇಗಾಯ್ತು ಹತ್ಯೆ?

ನಡು ಬೀದಿಯಲ್ಲಿ ಕೊಲೆ, ಸಿಸಿಟಿವಿ ವಿಡಿಯೋ ವೈರಲ್, ಯಾರಿದು ಹಂದಿ ಅಣ್ಣಿ? ಹೇಗಾಯ್ತು ಹತ್ಯೆ?

14/07/2022 9:01 PM
ನಿತಿನ್‌ ಕೈದೊಟ್ಲು

SHIVAMOGGA LIVE NEWS | SHIMOGA | 14 ಜುಲೈ 2022

ಇವತ್ತಿನ ಎಲ್ಲ NEWS
» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

shivamogga live news whatsappa number

ಹಾಡ ಹಗಲೆ, ನಗರದ ಪ್ರಮುಖ ಸರ್ಕಲ್’ನಲ್ಲಿ ರೌಡಿ ಶೀಟರ್ (ROWDY SHEETER) ಹಂದಿ ಅಣ್ಣಿ ಹತ್ಯೆಯಾಗಿದೆ. ಕಾರಿನಲ್ಲಿ ಬಂದ ದುಷ್ಕರ್ಮಿಗಳು ಅಣ್ಣಿಯನ್ನು ಕೆಲವೆ ಕ್ಷಣಗಳಲ್ಲಿ ಕೊಚ್ಚಿ ಪರಾರಿಯಾಗಿದ್ದಾರೆ. ಈಗ ಕೊಲೆಗಾರರ (MURDER) ಪತ್ತೆ ಕಾರ್ಯ ನಡೆಯುತ್ತಿದೆ.

Shimoga Nanjappa Hospital

ಕೊಲೆಗೂ ಮೊದಲು ಅಣ್ಣಪ್ಪ ಅಲಿಯಾಸ್ ಹಂದಿ ಅಣ್ಣಿಯನ್ನು ಸ್ವಲ್ಪ ದೂರದವರೆಗೂ ಅಟ್ಟಾಡಿಸಿಕೊಂಡು ಬರಲಾಗಿತ್ತು. ಇದರ ಸಿಸಿಟಿವಿ ವಿಡಿಯೋ ಈಗ ವೈರಲ್ ಆಗಿದೆ.

ಬೆಳಗ್ಗೆ 10.50ಕ್ಕೆ ಹರಿಯಿತು ನೆತ್ತರು

ಹಂದಿ ಅಣ್ಣಿ ತನ್ನ ಹೋಂಡಾ ಆಕ್ಟೀವಾ ಬೈಕ್’ನಲ್ಲಿ ಸೋಮಿನಕೊಪ್ಪ ರಸ್ತೆ ಕಡೆಯಿಂದ ತೆರಳುತ್ತಿದ್ದ. ಈ ಸಂದರ್ಭ ಹತ್ಯೆಕೋರರು ಇನ್ನೋವಾ ಕಾರಿನಲ್ಲಿ ಆತನನ್ನು ಹಿಂಬಾಲಿಸಿ ಬಂದಿದ್ದಾರೆ. ಲಕ್ಷ್ಮೀ ಟಾಕೀಸ್ ಕಡೆಗೆ ತೆರಳುವ ರಸ್ತೆಯಲ್ಲಿ ಪೊಲೀಸ್ ಚೌಕಿಯಿಂದ ಸ್ವಲ್ಪ ದೂರದವರೆಗೆ ಹಂದಿ ಅಣ್ಣಿ ತೆರಳಿದ್ದಾನೆ.

Shimoga Handi Anni Murder

ಅಟ್ಟಾಡಿಸಿಕೊಂಡು ಬಂದರು

ಹಂದಿ ಅಣ್ಣಿ ಮೇಲೆ ಏಕಾಏಕಿ ಗುಂಪೊಂದು ದಾಳಿ ನಡೆಸುತ್ತದೆ. ‘ಆರರಿಂದ ಏಳು ಜನರು ಮಾರಕಾಸ್ತ್ರಗಳನ್ನು ಹಿಡಿದುಕೊಂಡು ಹಂದಿ ಅಣ್ಣಿಯನ್ನು ಓಡಿಸಿಕೊಂಡು ಬರುತ್ತಾರೆ. ಪೊಲೀಸ್ ಚೌಕಿ ಬಳಿ ಆತನ ಮೇಲೆ ದಾಳಿ ನಡೆಸಿ, ಹತ್ಯೆ ಮಾಡುತ್ತಾರೆ’ ಎಂದು ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್ ತಿಳಿಸಿದ್ದಾರೆ.

ಕೆಲವೇ ಸೆಕೆಂಡ್’ನಲ್ಲಿ ಹತ್ಯೆ

ಲಾಂಗು ಮಚ್ಚುಗಳಿಂದ ಹಂದಿ ಅಣ್ಣಿಯನ್ನು ಹತ್ಯೆ ಮಾಡಲಾಗಿದೆ. ಕೆಲವೇ ಸೆಕೆಂಡ್’ನಲ್ಲಿ ಕೊಚ್ಚಿ ಕೊಲೆ ಮಾಡಲಾಗಿದೆ. ಹಂದಿ ಅಣ್ಣಿ ಸಾವನ್ನಪ್ಪಿರುವುದು ಖಾತ್ರಿಯಾಗುತ್ತಿದ್ದ ಹಾಗೆ ಕೊಲೆಗಾರರು ಸ್ಥಳದಿಂದ ಪಾರಾರಿಯಾಗುತ್ತಾರೆ. ಆದರೆ ಒಬ್ಬಾತ ಮಾತ್ರ ಮರಳಿ ಬಂದು ಹಂದಿ ಅಣ್ಣಿ ತಲೆಗೆ ಲಾಂಗ್ ಬೀಸಿ ಓಡಿದ್ದಾನೆ. ಹತ್ಯೆ ಮಾಡಿದವರು ಮುಖಕ್ಕೆ ಮಾಸ್ಕ್ ಧರಿಸಿದ್ದರು. ಅಲ್ಲದೆ ಹತ್ಯೆ ಮಾಡಿ ಇನ್ನೋವಾ ಕಾರಿನಲ್ಲೆ ಪಾರಿಯಾಗಿದ್ದಾರೆ.

Handi Anni Murder

ಅವಕ್ಕಾಗಿ ನಿಂತ ಜನರು

ಬೆಳ್ಳಂಬೆಳಗ್ಗೆ ನಡು ರಸ್ತೆಯಲ್ಲೇ ಬರ್ಬರವಾಗಿ ಹತ್ಯೆ ಮಾಡಿದ್ದನ್ನು ಕಂಡು, ನೆರೆದಿದ್ದ ಜನರು ಅವಕ್ಕಾಗಿದ್ದಾರೆ. ಕೆಲವು ನಿಮಿಷ ಮೃತದೇಹದ ಬಳಿಗೆ ತೆರಳಲು ಜನರು ಹೆದರಿದ್ದಾರೆ. ಕೂಡಲೆ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದಾರೆ. ವಿಚಾರ ತಿಳಿದು ಹಂದಿ ಅಣ್ಣಿ ಕುಟುಂಬದವರು ದುಃಖ ತೋಡಿಕೊಂಡರು. ಇದರಿಂದ ವಿನೋಬನಗರ ಪೊಲೀಸ್ ಚೌಕಿ ವೃತ್ತದಲ್ಲಿ ಕೆಲವು ಹೊತ್ತು ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಸಿಸಿಟಿವಿ ದೃಶ್ಯ ವೈರಲ್

ಹಂದಿ ಅಣ್ಣಿ ಹತ್ಯೆ ವಿಚಾರ ತಿಳಿಯುತ್ತಿದ್ದ ಹಾಗೆ ಪೊಲೀಸರು ತನಿಖೆ ಆರಂಭಿಸಿದರು. ಪೊಲೀಸ್ ಚೌಕಿಯಲ್ಲಿ ಸರ್ಕಲ್’ನಲ್ಲಿ ಇರುವ ವಿವಿಧ ಕಟ್ಟಡಗಳಲ್ಲಿನ ಸಿಸಿಟಿವಿಗಳನ್ನು ಪರಿಶೀಲನೆ ನಡೆಸಿದರು. ಈ ನಡುವೆ ಒಂದು ಸಿಸಿಟಿವಿ ದೃಶ್ಯ ವೈರಲ್ ಆಗಿದೆ. ಅದರಲ್ಲಿ ಹಂದಿ ಅಣ್ಣಿಯನ್ನು ಓಡಿಸಿಕೊಂಡು ಬರುವ ದೃಶ್ಯ ಸೆರೆಯಾಗಿದೆ.

Handi Anni Murder

ಯಾರಿದು ಹಂದಿ ಅಣ್ಣಿ?

ಹಂದಿ ಅಣ್ಣಿ ಅಲಿಯಾಸ್ ಅಣ್ಣಪ್ಪ ಶಿವಮೊಗ್ಗದ ರೌಡಿ ಶೀಟರ್. 2016ರವರೆಗೆ ವಿವಿಧ ರೌಡಿ ಚಟುವಟಿಕೆಯಲ್ಲಿ ಈತನ ಹೆಸರು ಕೇಳಿ ಬಂದಿತ್ತು. ಆ ಬಳಿಕ ಹಂದಿ ಅಣ್ಣಿ ವೈನ್ ಶಾಪ್ ನಡೆಸಿಕೊಂಡು, ಕಟ್ಟಡವೊಂದನ್ನು ಬಾಡಿಗೆಗೆ ಕೊಟ್ಟುಕೊಂಡು ಜೀವನ ನಡೆಸುತ್ತದ್ದ ಎಂದು ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್ ತಿಳಿಸಿದ್ದಾರೆ.

ಹಂದಿ ಅಣ್ಣಿ ವಿರುದ್ಧ 9 ಪ್ರಕರಣಗಳಿದ್ದವು. ಈ ಪೈಕಿ ಲವ ಕುಶ ಹತ್ಯೆ ಪ್ರಕರಣ, ನವುಲೆ ಮೋಹನ್ ಹತ್ಯೆ ಪ್ರಕರಣ ಸೇರಿ ಒಟ್ಟು ಮೂರು ಹತ್ಯೆ ಪ್ರಕರಣಗಳಿವೆ. ಡಕಾಯಿತಿ, ರಾಬರಿ, ಹಲ್ಲೆ ಪ್ರಕರಣಗಳಿದ್ದವು. 2016ರಿಂದ ಈಚೆಗೆ ಈತನ ವಿರುದ್ಧ  ಯಾವುದೆ ಪ್ರಕರಣ ದಾಖಲಾಗಿರಲಿಲ್ಲ ಎಂದು ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀ ಪ್ರಸಾದ್ ಅವರು ತಿಳಿಸಿದ್ದಾರೆ.

ಮುನ್ನೆಚ್ಚರಿಕೆ ನೀಡಿದ್ದ ಪೊಲೀಸರು

ಹಂದಿ ಅಣ್ಣಿ ಮೇಲೆ ದಾಳಿಯ ಕುರಿತು ಪೊಲೀಸರು ಈ ಮೊದಲೆ ಮುನ್ನೆಚ್ಚರಿಕೆ ನೀಡಿದ್ದರು. ‘ನಾವು ಆತನ ಚಟುವಟಿಕೆ ಮೇಲೆ ನಿಗಾ ವಹಿಸಿದ್ದೆವು. ಆತನ ಪ್ರಕರಣಗಳ ಕುರಿತು ಪಟ್ಟಿ ಸಿದ್ಧಪಡಿಸಿಕೊಂಡು, ಯಾವೆಲ್ಲ ಪ್ರಕರಣದಲ್ಲಿ ವಿಚಾರಣೆ ನಡೆಯುತ್ತಿದೆ, ಯಾವುದು ಖುಲಾಸೆಯಾಗಿದೆ ಎಂದು ಪರಿಶೀಲನೆ ನಡೆಸುತ್ತಿದ್ದೆವು. ಅಲ್ಲದೆ ಆತನ ಮೇಲೆ ದಾಳಿ ಆಗುವ ಸಂಭವ ಕುರಿತು ಮುನ್ನೆಚ್ಚರಿಕೆಯನ್ನು ನೀಡಿದ್ದವು’ ಎಂದು ಜಿಲ್ಲಾ ರಕ್ಷಣಾಧಿಕಾರಿ ಲಕ್ಷೀಪ್ರಸಾದ್ ತಿಳಿಸಿದ್ದಾರೆ.

ಸದ್ಯ ಹಂದಿ ಅಣ್ಣಿ ಹತ್ಯೆ ಪ್ರಕರಣ ಸಂಬಂಧ ತನಿಖೆ ಮತ್ತು ಆರೋಪಿಗಳ ಪತ್ತೆಗೆ ನಾಲ್ವರು ಇನ್ಸ್ ಪೆಕ್ಟರ್’ಗಳ ನೇತೃತ್ವದಲ್ಲಿ ತಂಡ ರಚಿಸಲಾಗಿದೆ. ಶೀಘ್ರದಲ್ಲೇ ಆರೋಪಿಗಳನ್ನು ಪತ್ತೆ ಹಚ್ಚಲಾಗುತ್ತದೆ ಎಂದು ಪೊಲೀಸರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ನಡು ರಸ್ತೆಯಲ್ಲೇ ರೌಡಿ ಶೀಟರ್ ಬರ್ಬರ ಹತ್ಯೆ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article Bhadra-Dam-gate-opened-2022 BREAKING NEWS | ಭದ್ರಾ ಜಲಾಶಯದ ನಾಲ್ಕು ಗೇಟ್ ಓಪನ್, ಎಷ್ಟು ನೀರು ಹೊರ ಬಿಡಲಾಗುತ್ತಿದೆ?
Next Article Bhadravathi-New-Bridge-Drowned ಭದ್ರಾವತಿ ಹೊಸ ಸೇತುವೆ ಸಂಪೂರ್ಣ ಜಲಾವೃತ, ಸೇತುವೆ ಮುಂದೆ ಬ್ಯಾರಿಕೇಡ್

ಇದನ್ನೂ ಓದಿ

BJP-City-president-Mohan-Reddy-press-meet.
SHIVAMOGGA CITY

ತುರ್ತು ಪರಿಸ್ಥಿತಿಗೆ 50 ವರ್ಷ, ಶಿವಮೊಗ್ಗದಲ್ಲಿ ಕರಾಳ ದಿನ, ಯಾವಾಗ? ಏನೆಲ್ಲ ಕಾರ್ಯಕ್ರಮ ಇರುತ್ತೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
23/06/2025
power cut mescom ELECTRICITY
SHIVAMOGGA CITY

ಶಿವಮೊಗ್ಗ ಸಿಟಿಯ ಅರ್ಧಕ್ಕರ್ಧ ಭಾಗದಲ್ಲಿ ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
23/06/2025
Traffic-Police-checks-School-vans-in-Shimoga-city
SHIVAMOGGA CITY

ಶಿವಮೊಗ್ಗ ಸಿಟಿಯಲ್ಲಿ ಶಾಲಾ ವಾಹನಗಳ ದಿಢೀರ್‌ ತಪಾಸಣೆ, ನಾಲ್ಕು ಡ್ರಂಕ್‌ ಅಂಡ್‌ ಡ್ರೈವ್‌ ಕೇಸ್‌ ಪತ್ತೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
23/06/2025
Former-Minister-MP-Renukacharya-at-Shimoga-DAR-Police-ground
SHIVAMOGGA CITY

ಶಿವಮೊಗ್ಗದಲ್ಲಿ ದಾವಣಗೆರೆ ಸಿಟಿ ಬಂದ್‌ಗೆ ದಿನಾಂಕ ಘೋಷಿಸಿದ ಮಾಜಿ ಸಚಿವ ರೇಣುಕಾಚಾರ್ಯಾ, ಯಾವಾಗ? ಯಾಕೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
23/06/2025
Beluru-Gopalakrishna-Speaks-to-media-about-BJP-Leaders
SHIVAMOGGA CITY

‘ಆಗ ಬೀದಿ ರಂಪಾಟ ಮಾಡಿದ್ದ ಬಿಜೆಪಿ ನಾಯಕರ ಬಾಯಿ ಈಗ ಒಣಗಿ ಹೋಗಿದೆಯೇ?ʼ, ಬೇಳೂರು ಗರಂ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
23/06/2025
Beluru-Gopalakrishna-speaks-to-media-in-Shimoga
SHIVAMOGGA CITY

‘ಮಿನಿಸ್ಟರ್‌ ರಾಜೀನಾಮೆ ನೀಡಲಿ, ತನಿಖೆ ಎದುರಿಸಲಿʼ, ಬೇಳೂರು ಗೋಪಾಲಕೃಷ್ಣ ಸಲಹೆ, ಕಾಂಗ್ರೆಸ್‌ನಲ್ಲಿ ಸಂಚಲನ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
23/06/2025
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?