ಶಿವಮೊಗ್ಗದ ಲೈವ್.ಕಾಂ | SHIMOGA NEWS | 21 ಫೆಬ್ರವರಿ 2022
ಹರ್ಷನನ್ನು ಹತ್ಯೆ ಮಾಡಿದ್ದು ಯಾರು ಅನ್ನುವುದು ಗೊತ್ತಿಲ್ಲ. ಆದರೆ ನಮ್ಮ ಕುಟುಂಬಕ್ಕೆ ನ್ಯಾಯ ಕೊಡಿಸಿ. ಜಯರಾಮ್ ಶ್ರೀರಾಮ್ ಎಂದು ಹೇಳಿಕೊಂಡೆ ಹೋದ ಎಂದು ಹತ್ಯೆಗೀಡಾದ ಹರ್ಷನ ಸಹೋದರಿ ಅಶ್ವಿನಿ ಅಳಲು ತೋಡಿಕೊಂಡಿದ್ದಾರೆ.
ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಶ್ವಿನಿ ಅವರು, ನಾನು ಚಿಕ್ಕಮಗಳೂರಿನಲ್ಲಿ ಇದ್ದೆ. ಫೋನ್ ಮಾಡಿ ನಿನ್ನ ತಮ್ಮನನ್ನು ಹೊಡೆದು ಹಾಕಿದ್ದಾರೆ ಎಂದರು. ವಾಟ್ಸಪ್’ನಲ್ಲಿ ವಿಡಿಯೋ, ಫೋಟೊ ಕಳುಹಿಸಿದರು. ಈಗ ನಾವು ಯಾರ ಬಳಿ ನ್ಯಾಯ ಕೇಳೋಣ ಎಂದರು.
ಹರ್ಷ ಯಾರಿಗೂ ತೊಂದರೆ ಮಾಡಿದವನಲ್ಲ. ಜಯರಾಮ್ ಶ್ರೀರಾಮ ಅಂದುಕೊಂಡೆ ಹೋದ. ಹತ್ಯೆ ಮಾಡಿದವರು ಯಾರು ಅನ್ನುವುದು ನಮಗೆ ಗೊತ್ತಿಲ್ಲ. ನಮ್ಮ ಕುಟುಂಬಕ್ಕೆ ನ್ಯಾಯ ಕೊಡಿಸಿ. ಹರ್ಷಾ ಹಿಂದೂ ಎಂದು ಹೆಸರಿಟ್ಟುಕೊಂಡಿದ್ದೆ ತಪ್ಪಾ ಎಂದು ಅಶ್ವಿನಿ ಪ್ರಶ್ನಿಸಿದ್ದಾರೆ.
ಗೃಹ ಸಚಿವರಿಗೆ ಮನವಿ
ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹರ್ಷನ ಕುಟುಂಬದವರನ್ನು ಭೇಟಿಯಾಗಿ ಸಾಂತ್ವನ ಹೇಳಿದರು. ಈ ಸಂದರ್ಭ ತಮ್ಮ ಸಹೋದರನ ಸಾವಿಗೆ ನ್ಯಾಯ ಕೊಡಿಸುವಂತೆ ಅಶ್ವಿನಿ ಅವರು ಮನವಿ ಮಾಡಿದರು.
ಇದನ್ನೂ ಓದಿ | ‘ಕೊಲೆ ಆರೋಪಿಗಳ ಸುಳಿವು ಪತ್ತೆ, ಸದ್ಯದಲ್ಲೇ ಅರೆಸ್ಟ್’
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200