ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 30 MAY 2024
BHADRAVATHI : ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಗಿಲಿನ ಲಾಕ್ (Lock) ಮುರಿದು ಕಳ್ಳತನ ಮಾಡಲಾಗಿದೆ. ಕುಟುಂಬದವರು ಸಂಬಂಧಿಯ ಮದುವೆ ಸಮಾರಂಭ ಮುಗಿಸಿ ಹುಬ್ಬಳ್ಳಿಯಿಂದ ಭದ್ರಾವತಿಯ ಹೊಸಮನೆ ಬಡಾವಣೆಯ ಕೇಶವಾಪುರಕ್ಕೆ ಮರಳಿದಾಗ ವಿಷಯ ಬೆಳಕಿಗೆ ಬಂದಿದೆ.
ಇದನ್ನೂ ಓದಿ – ಹೊಳೆಹೊನ್ನೂರು ಬಳಿ ತುಂಗಭದ್ರ ನದಿ ದಂಡೆ ಮೇಲೆ ಅಧಿಕಾರಿಗಳು, ಪೊಲೀಸರಿಂದ ದಾಳಿ
ಶಕೀಲ್ ಅಹಮದ್ ಅವರ ಮನೆಯಲ್ಲಿ ಕಳ್ಳತನವಾಗಿದೆ. ಮೇ 18ರಂದು ಕುಟುಂಬದವರು ಹುಬ್ಬಳ್ಳಿಗೆ ತೆರಳಿದ್ದರು. ಮೇ 27ರಂದು ಮನೆಗೆ ಮರಳಿದಾಗ ಮುಂದಿನ ಬಾಗಿಲು ತೆರೆದಂತ್ತಿತ್ತು. ಒಳ ಹೋಗಿ ನೋಡಿದಾಗ ವಸ್ತುಗಳ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಬೀರುವಿನಲ್ಲಿದ್ದ 99 ಸಾವಿರ ರೂ. ಮೌಲ್ಯದ ಆಭರಣ ಕಳ್ಳತನ ಮಾಡಿರುವುದು ಗೊತ್ತಾಗಿದೆ. ಘಟನೆ ಸಂಬಂಧ ಹೊಸಮನೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್ಡೇಟ್

About The Editor
ನಿತಿನ್ ಆರ್.ಕೈದೊಟ್ಲು
















