SHIVAMOGGA LIVE NEWS | 30 MAY 2024
BHADRAVATHI : ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಗಿಲಿನ ಲಾಕ್ (Lock) ಮುರಿದು ಕಳ್ಳತನ ಮಾಡಲಾಗಿದೆ. ಕುಟುಂಬದವರು ಸಂಬಂಧಿಯ ಮದುವೆ ಸಮಾರಂಭ ಮುಗಿಸಿ ಹುಬ್ಬಳ್ಳಿಯಿಂದ ಭದ್ರಾವತಿಯ ಹೊಸಮನೆ ಬಡಾವಣೆಯ ಕೇಶವಾಪುರಕ್ಕೆ ಮರಳಿದಾಗ ವಿಷಯ ಬೆಳಕಿಗೆ ಬಂದಿದೆ.
ಇದನ್ನೂ ಓದಿ – ಹೊಳೆಹೊನ್ನೂರು ಬಳಿ ತುಂಗಭದ್ರ ನದಿ ದಂಡೆ ಮೇಲೆ ಅಧಿಕಾರಿಗಳು, ಪೊಲೀಸರಿಂದ ದಾಳಿ
ಶಕೀಲ್ ಅಹಮದ್ ಅವರ ಮನೆಯಲ್ಲಿ ಕಳ್ಳತನವಾಗಿದೆ. ಮೇ 18ರಂದು ಕುಟುಂಬದವರು ಹುಬ್ಬಳ್ಳಿಗೆ ತೆರಳಿದ್ದರು. ಮೇ 27ರಂದು ಮನೆಗೆ ಮರಳಿದಾಗ ಮುಂದಿನ ಬಾಗಿಲು ತೆರೆದಂತ್ತಿತ್ತು. ಒಳ ಹೋಗಿ ನೋಡಿದಾಗ ವಸ್ತುಗಳ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಬೀರುವಿನಲ್ಲಿದ್ದ 99 ಸಾವಿರ ರೂ. ಮೌಲ್ಯದ ಆಭರಣ ಕಳ್ಳತನ ಮಾಡಿರುವುದು ಗೊತ್ತಾಗಿದೆ. ಘಟನೆ ಸಂಬಂಧ ಹೊಸಮನೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200