ಊರಿಗೆ ಹೋಗಿದ್ದಾಗ ಪಕ್ಕದ ಮನೆ ಮಹಿಳೆಯಿಂದ ಬಂತು ಫೋನ್‌, ವಾಪಸಾದಾಗ ಕಾದಿತ್ತು ಶಾಕ್

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ: ಕುಟುಂಬದವರು ಊರಿಗೆ ಹೋಗಿದ್ದಾಗ ಮನೆ ಬಾಗಿಲಿನ ಲಾಕ್‌ ಮೀಟಿ ಒಳಗೆ ನುಗ್ಗಿರುವ ಕಳ್ಳರು ಚಿನ್ನಾಭರಣ, ನಗದು ಮತ್ತು ಬೆಳ್ಳಿ ವಸ್ತುಗಳನ್ನು ಕಳ್ಳತನ ಮಾಡಿದ್ದಾರೆ. ಬೊಮ್ಮನಕಟ್ಟೆ ಆಶ್ರಯ ಬಡಾವಣೆಯ ಡಿ ಬ್ಲಾಕ್‌ನಲ್ಲಿರುವ ದಿನೇಶ್‌ ಕುಮಾರ್‌ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ದಿನೇಶ್‌ ಕುಮಾರ್‌ ಮತ್ತು ಅವರ ಪೋಷಕರು ಸಾಗರದ ತಮ್ಮೂರಿಗೆ ತೆರಳಿದ್ದರು. ಪಕ್ಕದ ಮನೆಯ ಮಹಿಳೆ ಕರೆ ಮಾಡಿ ಮನೆಯಲ್ಲಿ ಕಳ್ಳತನವಾಗಿದೆ ಎಂದು ಮಾಹಿತಿ ನೀಡಿದ್ದರು. ಕೂಡಲೆ ದಿನೇಶ್‌ ಕುಮಾರ್‌ ಮನೆಗೆ ಮರಳಿದ್ದು ಬೀರುವಿನಲ್ಲಿದ್ದ ಚಿನ್ನಾಭರಣ, ನಗದು ಕಳ್ಳತನ ಆಗಿರುವುದು ಗೊತ್ತಾಗಿದೆ.

ಇದನ್ನೂ ಓದಿ » ಬಿಹಾರ ಫಲಿತಾಂಶ, ಶಿವಮೊಗ್ಗದಲ್ಲಿ ಯಡಿಯೂರಪ್ಪ, ರಾಘವೇಂದ್ರ ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಬಾಗಿಲಿನ ಲಾಕ್‌ ಮುರಿದ ಕಳ್ಳರು ಬೀರುವಿನಲ್ಲಿದ್ದ ಚಿನ್ನದ ಲಕ್ಷ್ಮಿ ಕಾಸು, ಉಂಗುರಗಳು ಸೇರಿದ ₹45,000 ಮೌಲ್ಯದ ಆಭರಣಗಳು, ₹45,000 ನಗದು, ₹1200 ಮೌಲ್ಯದ ಬೆಳ್ಳಿ ಉಡುದಾರವನ್ನು ಕಳ್ಳತನ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಘಟನೆ ಸಂಬಂಧ ವಿನೋಬನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.‌

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment