SHIVAMOGGA LIVE NEWS | 11 DECEMBER 2023
SHIMOGA : ಮನೆ ಬಾಗಿಲಿನ ಬೀಗ ಮುರಿದು ಚಿನ್ನಾಭರಣ ಮತ್ತು ನಗದು ದೋಚಲಾಗಿದೆ. ಶಿವಮೊಗ್ಗ ತಾಲೂಕು ಗೋವಿಂದಾಪುರದ ವಿಜಯಲಕ್ಷ್ಮಿ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ.
ಹಾಯ್ಹೊಳೆಯಲ್ಲಿ ಹೊಸ ಮನೆ ನಿರ್ಮಾಣ ಕಾರ್ಯ ವೀಕ್ಷಿಸಲು ವಿಜಯಲಕ್ಷ್ಮಿ ಅವರು ಪತಿಯೊಂದಿಗೆ ತೆರಳಿದ್ದರು. ಈ ಸಂದರ್ಭ ಗೋವಿಂದಾಪುರದ ವಾಸದ ಮನೆಯ ಬಾಗಿಲಿನ ಬೀಗ ಮುರಿದ ಕಳ್ಳರು ದೇವರ ಮನೆಯ ಸ್ಟೀಲ್ ಹುಂಡಿಯಲ್ಲಿಟ್ಟದ್ದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಮತ್ತು ಒಂದು ಲಕ್ಷ ರೂ. ನಗದು ಕಳ್ಳತನ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
ಕಳ್ಳತನವಾಗಿರುವ ಚಿನ್ನಾಭರಣ ಮತ್ತು ನಗದು ಮೊತ್ತ 2.95 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಘಟನೆ ಸಂಬಂಧ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಜನ ಶತಾಬ್ದಿ, ಇಂಟರ್ಸಿಟಿ ವಿರುದ್ಧ ದೂರು, ಬಳಕೆದಾರರ ಸಭೆಯಲ್ಲಿ ಏನೇನೆಲ್ಲ ಚರ್ಚೆಯಾಯ್ತು? ಇಲ್ಲಿದೆ 7 ಪಾಯಿಂಟ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200