SHIMOGA, 22 AUGUST 2024 | ಕುಟುಂಬದವರೆಲ್ಲ ಹಿಂಬದಿ ಶೆಡ್ನಲ್ಲಿ ಮಲಗಿದ್ದಾಗ ಮನೆಯ ಬಾಗಿಲು ಮೀಟಿ ಚಿನ್ನಾಭರಣ ಕಳ್ಳತನ (Theft) ಮಾಡಲಾಗಿದೆ. ಶಿವಮೊಗ್ಗ ತಾಲೂಕು ಹಾಯ್ಹೊಳೆ ಸಮೀಪದ ಭಾರತಿ ನಗರದಲ್ಲಿ ಘಟನೆ ಸಂಭವಿಸಿದೆ.
ಮೀನಾಕ್ಷಿ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಮೀನಾಕ್ಷಿ ಅವರ ಪುತ್ರಿ ಈಚೆಗೆ ತೀರಿಕೊಂಡಿದ್ದರು. ಈ ಹಿನ್ನೆಲೆ ಪೂಜೆ ಮಾಡಿಸಲಾಗಿತ್ತು. ಅದೇ ಕಾರಣಕ್ಕೆ ಮನೆಯವರೆಲ್ಲ ಹಿಂಬದಿಯಲ್ಲಿರುವ ಶೆಡ್ನಲ್ಲಿ ಮಲಗುತ್ತಿದ್ದರು. ಆ.17ರಂದು ರಾತ್ರಿ ಊಟ ಮುಗಿಸಿ ಶೆಡ್ನಲ್ಲಿ ಎಲ್ಲರು ಮಲಗಿದ್ದರು. ಬೆಳಗ್ಗೆ ಮನೆಗೆ ಬಂದಾಗ ಬಾಗಿಲು ಮೀಟಿ ತೆಗೆಯಲಾಗಿತ್ತು ಎಂದು ಆರೋಪಿಸಲಾಗಿದೆ.
![]() |
ಮನೆಯ ರೂಂನ ಬೀರುವಿನಲ್ಲಿ ಇಟ್ಟಿದ್ದ ಚಿನ್ನಾಭರಣ ಕಳ್ಳತನ ಮಾಡಲಾಗಿದೆ. 2.40 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳುವಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ ⇒ ಪಡಿತರ ಚೀಟಿದಾರರೆ ಗಮನಿಸಿ, ಆ.31 ಕೊನೆ ದಿನ, ತಪ್ಪಿದರೆ ಪಡಿತರ ಸಿಗಲ್ಲ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200