FATAFAT NEWS, 17 AUGUST 2024
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ತಿಂಡಿ ತಿಂದು ಹೊಟೇಲ್ನಿಂದ ಹೊರ ಬಂದ ವ್ಯಕ್ತಿಗೆ ಶಾಕ್
ಶಿವಮೊಗ್ಗ ಲೈವ್.ಕಾಂ : ಹೊಟೇಲ್ನಲ್ಲಿ ತಿಂಡಿ ತಿಂದು ವಾಪಸ್ ಬರುವಷ್ಟರಲ್ಲಿ ಬೈಕ್ ಕಳ್ಳತನವಾಗಿದೆ (THEFT). ಮೊಹಮದ್ ಇಕ್ಬಾಲ್ ಅಹಮದ್ ಎಂಬುವವರು ತಮಗೆ ಸೇರಿದ ಹೋಂಡಾ ಆಕ್ಟೀವಾ ಬೈಕ್ ಅನ್ನು ಶಿವಮೊಗ್ಗದ ಆಶೋಕ ಹೊಟೇಲ್ ರಸ್ತೆಯಲ್ಲಿ ಪಾರ್ಕ್ ಮಾಡಿದ್ದರು. ಹೊಟೇಲ್ನಲ್ಲಿ ತಿಂಡಿ ತಿಂದು ಮರಳುವಷ್ಟರಲ್ಲಿ ಬೈಕ್ ಇರಲಿಲ್ಲ. ಎಲ್ಲೆಡೆ ಹುಡುಕಿದೆ ಮೊಹಮದ್ ಇಕ್ಬಾಲ್ ಅಹಮದ್ ಅವರು ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೂವರು ಚಾಲಕರಿಂದ ಆಟೋ ಚಾಲಕನ ಮೇಲೆ ಹಲ್ಲೆ
ಶಿವಮೊಗ್ಗ ಲೈವ್.ಕಾಂ : ಊರಿನಿಂದ ಬಂದಿದ್ದ ತಂಗಿಯನ್ನು ಆಟೋದಲ್ಲಿ ಕರೆದೊಯ್ದ ಚಾಲಕನ ಮೇಲೆ ಸ್ಟಾಂಡ್ನಲ್ಲಿ ನಿಲ್ಲಿಸಿದ್ದ ಆಟೋದ ಚಾಲಕರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಶಿವಮೊಗ್ಗದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಮುಂಭಾಗ ಘಟನೆ ಸಂಭವಿಸಿದೆ. ಆಟೋ ಚಾಲಕ ಅಜಯ್ ಮೇಲೆ ಮೂವರು ಆಟೋ ಚಾಲಕರು ಹಲ್ಲೆ ನಡೆಸಿದ್ದಾರೆ. ಊರಿಂದ ಬಂದಿದ್ದ ತಂಗಿ ಮತ್ತು ಮಕ್ಕಳನ್ನು ಆಟೋ ಹತ್ತಿಸಿಕೊಂಡಿದ್ದಾರೆ. ಆಗ ಇತರೆ ಆಟೋ ಚಾಲಕರು ಆಟೋ ತಂದು ಅಡ್ಡ ನಿಲ್ಲಿಸಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ದೊಡ್ಡಪೇಟೆ ಠಾಣೆಯಲ್ಲಿ ದೂರು ನೀಡಿದ್ದಾರೆ.
ಇದನ್ನೂ ಓದಿ ⇒ ಶಿವಮೊಗ್ಗದ ಎಲ್ಲಾ ಆಸ್ಪತ್ರೆಗಳ ಹೊರ ರೋಗಿ ವಿಭಾಗ ಇನ್ನು 24 ಗಂಟೆ ಬಂದ್
ತಿಥಿ ಕಾರ್ಯ ಮುಗಿಸಿ ಬರುವಷ್ಟರಲ್ಲಿ ಮನೆಯಲ್ಲಿ ಕಳ್ಳತನ
ಶಿವಮೊಗ್ಗ ಲೈವ್.ಕಾಂ : ಕುಟುಂಬದವರೆಲ್ಲ ಸಂಬಂಧಿಯೊಬ್ಬರ ತಿಥಿ ಕಾರ್ಯಕ್ಕೆ ಹೋಗಿದ್ದ ವೇಳೆ ಮನೆಯಲ್ಲಿ ಕಳ್ಳತನವಾಗಿದೆ. ಚಿನ್ನ, ಬೆಳ್ಳಿ ಅಭರಣ ಮತ್ತು ನಗದು ಸೇರಿ 1.47 ಲಕ್ಷ ರೂ. ಮೌಲ್ಯದ ವಸ್ತುಗಳು ಕಳ್ಳತನವಾಗಿದೆ. ಹೊಸನಗರ ತಾಲೂಕು ನಗರ ಹೋಬಳಿಯ ಕಾನುಗೋಡು ಗ್ರಾಮದ ರಾಮಕೃಷ್ಣ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ತಿಥಿ ಕಾರ್ಯ ಮುಗಿಸಿ ಮನೆ ಬಳಿ ಬಂದಾಗ ಬಾಗಿಲುಗಳು ತೆರೆದಿದ್ದವು. ಮನೆಯೊಳಗೆ ಲೈಟ್ ಕಾಣಿಸಿತ್ತು. ಒಳ ಹೋಗಿ ನೋಡಿದಾಗ ಬೀರು ಬಾಗಿಲು ತೆರೆದುಕೊಂಡಿತ್ತು. ವಸ್ತುಗಳು ಚೆಲ್ಲಾಪಿಲ್ಲಿಯಾಗಿದ್ದವು ಎಂದು ದೂರಿನಲ್ಲಿ ಆರೋಪಿಸಲಾಗಿದೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ ⇒ EXCLUSIVE | ಆಗುಂಬೆಗೆ ಆಸ್ಟ್ರೇಲಿಯಾದ ಭಾರತೀಯ ಹೈಕಮಿಷನರ್ ಭೇಟಿ, 3 ದಿನ ಅಧ್ಯಯನ ಪ್ರವಾಸ
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






