ಶಿವಮೊಗ್ಗ ಲೈವ್.ಕಾಂ | SAGARA NEWS | 21 ಸೆಪ್ಟೆಂಬರ್ 2021
ಮನೆಯ ಹಿಂದಿನ ಬಾಗಿಲಿಗೆ ಹಾಕಿದ್ದ ಬೀಗ ಒಡೆದು, ಬೀರುವಿನಲ್ಲಿ ಇಟ್ಟಿದ್ದ ಚಿನ್ನಾಭರಣ ಮತ್ತು ನಗದು ಕಳ್ಳತನ ಮಾಡಲಾಗಿದೆ.
ಸಾಗರ ತಾಲೂಕು ಗೆಣಸಿನಕುಣಿ ಗ್ರಾಮದ ಮಂಜುನಾಥ ಜೋಗಿ ಅವರ ಮನೆಯಲ್ಲಿ ಕಳ್ಳತನವಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಲೆಯಲ್ಲಿ ಘಟನೆ ಸಂಭವಿಸಿದೆ.
ಅರ್ಧ ಗಂಟೆಯಲ್ಲಿ ಕಳ್ಳತನ
ಮಂಜುನಾಥ ಜೋಗಿ ಅವರ ಮಗ ಶಿವಮೊಗ್ಗದಲ್ಲಿ ಸೈಟ್ ಎಂಜಿನಿಯರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸಾಗರಕ್ಕೆ ಬಂದ ಮಗನನ್ನು ಕರೆತರಲು ಮಂಜುನಾಥ ಜೋಗಿ ಅವರು ಹೆಂಡತಿ ಮತ್ತು ಮಗಳೊಂದಿಗೆ ರಾತ್ರಿ 9 ಗಂಟೆಗೆ ತೆರಳಿದ್ದರು.
ಅರ್ಧ ಗಂಟೆಯಲ್ಲಿ ಮನೆಗೆ ವಾಪಸ್ ಬಂದಿದ್ದಾರೆ. ಅಷ್ಟರೊಳಗೆ ಕಳ್ಳರು ಮನೆಯ ಹಿಂದಿನ ಕಬ್ಬಿಣದ ಬಾಗಿಲಿನ ಬೀಗ ಒಡೆದು ಕಳ್ಳತನ ಮಾಡಿದ್ದಾರೆ. ಮನೆಯಲ್ಲಿದ್ದ ಎರಡು ಬೀರುಗಳ ಬಾಗಿಲು ಒಡೆದು, ಲಾಕರ್’ನಲ್ಲಿದ್ದ ಹಣ, ಚಿನ್ನಾಭರಣ ದೋಚಿದ್ದಾರೆ.
ಬೀರುವಿನಲ್ಲಿ ಇಟ್ಟಿದ್ದ 80 ಸಾವಿರ ರೂ. ನಗದು, 10 ಗ್ರಾಂ ತೂಕದ ಎರಡು ಬಂಗಾರದ ಚೈನ್, ಒಂದು ಬಂಗಾರದ ಪೆಂಡೆಂಟ್, 6 ಜೊತೆ ಬೆಳ್ಳಿ ಕಾಲುಂಗುರ, 4 ಜೊತೆ ಬೆಳ್ಳಿ ಕಾಲು ಚೈನ್, 2 ಬೆಳ್ಳಿ ಉಂಗುರವನ್ನು ಕಳ್ಳತನ ಮಾಡಲಾಗಿದೆ.
ಘಟನೆ ಸಂಬಂಧ ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200