ಶಿವಮೊಗ್ಗದ ಲೈವ್.ಕಾಂ | SHIMOGA NEWS | 28 ಡಿಸೆಂಬರ್ 2021
ಮನೆಯಲ್ಲಿ ಯಾರೂ ಇಲ್ಲದಿರುವ ಸಂದರ್ಭ ಹಿಂಬಾಗಿಲನ್ನು ಮೀಟಿ ಕಳ್ಳತನ ಮಾಡಲಾಗಿದೆ. ನಗದು, ಬೆಳ್ಳಿ ವಸ್ತುಗಳು, ದುಬಾರಿ ವಾಚ್ ಕಳವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಶಿವಮೊಗ್ಗದ ಸವಾಯಿ ಪಾಳ್ಯದ ಜಂಬೂರು ಮೊಹಲ್ಲಾದ ಸರ್ವಾರ್ ಷರೀಫ್ ಅವರ ಮನೆಯಲ್ಲಿ ಕಳ್ಳತನವಾಗಿದೆ. ಸರ್ವಾರ್ ಷರೀಫ್ ಅವರ ಕುಟುಂಬದವರು ಬೆಂಗಳೂರಿಗೆ ತೆರಳಿದ್ದರು. ಈ ಸಂದರ್ಭ ಮನೆಯ ಹಿಂಬಾಗಿಲನ್ನು ಮೀಟಿರುವ ಕಳ್ಳರು, ಒಳಗಿರುವ ಬೀರೂ ಬಾಗಿಲನ್ನು ಮೀಟಿ ಕಳ್ಳತನ ಮಾಡಿದ್ದಾರೆ.
ಬೀರೂವಿನಲ್ಲಿದ್ದ 9 ಸಾವಿರ ನಗದು, ಮೂರು ಸಾವಿರ ರೂ. ಮೌಲ್ಯದ ಬೆಳ್ಳಿ ವಸ್ತುಗಳು, ಆರು ಸಾವಿರ ಮೌಲ್ಯದ ವಾಚ್ ಕಳ್ಳತನವಾಗಿದೆ. ಮನೆಯಲ್ಲಿದ್ದ ಮತ್ತೊಂದು ಬೀರೂ ಬಾಗಿಲನ್ನು ಮೀಟಿರುವ ಕಳ್ಳರಿಗೆ ಅದರಲ್ಲಿ ಏನೂ ಸಿಕ್ಕಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಮನೆಯ ಹಿಂಬಾಗಲು ತೆರೆದಿರುವುದನ್ನು ಗಮನಿಸಿದ ಅಕ್ಕಪಕ್ಕದ ಮನೆಯವರು, ಸರ್ವಾರ್ ಷರೀಫ್ ಅವರಿಗೆ ಕರೆ ಮಾಡಿ, ವಿಚಾರ ತಿಳಿಸಿದ್ದಾರೆ. ಬೆಂಗಳೂರಿನಿಂದ ಆಗಮಿಸಿದ ಕುಟುಂಬದವರಿಗೆ ಮನೆಯಲ್ಲಿ ಕಳ್ಳತನವಾಗಿರುವುದು ಗೊತ್ತಾಗಿದೆ.
ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200