ಶಿವಮೊಗ್ಗದಲ್ಲಿ ಕಾರಿಗೆ ಪೆಟ್ರೋಲ್ ಹಾಕಿಸಿಕೊಂಡು ಬರುವಷ್ಟರಲ್ಲಿ ಮನೆ ಬೀಗ ಮುರಿದು ಚಿನ್ನಾಭರಣ, ಬೆಳ್ಳಿ ವಸ್ತುಗಳು ಕಳ್ಳತನ

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಡಿಸೆಂಬರ್ 2021

ಕಾರಿಗೆ ಪೆಟ್ರೋಲ್ ಭರ್ತಿ ಮಾಡಿಕೊಂಡು ಬರುವಷ್ಟರಲ್ಲಿ ಮನೆಯೊಂದರ ಇಂಟರ್ ಲಾಕ್ ಮುರಿದು, ಲಕ್ಷಾಂತರ ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳನ್ನು ಕಳ್ಳತನ ಮಾಡಲಾಗಿದೆ.

AVvXsEgs2CAQQwFXPEeKJ0M8TIYSuTjC1YFP87yReiHpVPmRryODfVeCXuFAqftB8kOZ5mPWZitv CEgSxJ 0UftK 3Xtg FQnjiLvzYXdPYIyMcbnCizoegDYgVDMGV3v1L2lUIeE2 3X339z1W9X2I3kEIgBbfYiP ZYP9tZPaJV64qH Ith d6U8fBL4P5A=s926

ಮೇಲಿನ ತುಂಗಾನಗರದ ವೆಂಕಟೇಶ್ ಅವರ ಮನೆಯಲ್ಲಿ ಘಟನೆ ಸಂಭವಿಸಿದೆ. ವೆಂಕಟೇಶ್ ಅವರು ಬೆಳಗ್ಗೆ 10 ಗಂಟೆ ಹೊತ್ತಿಗೆ ತಮ್ಮ ಮನೆಯ ಇಂಟರ್ ಲಾಕ್ ಹಾಕಿ, ಸಮೀಪದ ಪೆಟ್ರೋಲ್ ಬಂಕ್’ಗೆ ತೆರಳಿದ್ದರು.

shivamogga live subscribe New Kannada

ತಮ್ಮ ಕಾರಿಗೆ ಪೆಟ್ರೋಲ್ ಭರ್ತಿ ಮಾಡಿಕೊಂಡು ಬರವಷ್ಟರಲ್ಲಿ ಕಳ್ಳರು ಮನೆ ಬೀಗ ಮರಿದಿದ್ದಾರೆ. ಬಂಗಾರದ ಚೈನ್, ಉಂಗುರಗಳು ಸೇರಿದಂತೆ 1.20 ಲಕ್ಷ ರೂ. ಬೆಲೆಬಾಳುವ ಚಿನ್ನಾಭರಣ, 20 ಸಾವಿರ ಮೌಲ್ಯದ ಬೆಳ್ಳಿ ವಸ್ತುಗಳನ್ನು ಕಳ್ಳರು ಕದ್ದೊಯ್ದಿದ್ದಾರೆ.

Kalleshwara-Enterprises.webp

ಕಳ್ಳತನದ ಬಗ್ಗೆ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment