SHIVAMOGGA LIVE NEWS | 6 ಮಾರ್ಚ್ 2022
ಮನೆ ಸಮೀಪದ ಬಾವಿಗೆ ಹಾರಿ ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಸಂಬಂಧ ಗೃಹಿಣಿಯ ಅತ್ತೆ ವಿರುದ್ಧ ಪ್ರಕರಣ ದಾಖಲಾಗಿದೆ.
ಭದ್ರಾವತಿ ತಾಲೂಕು ನಾಗತಿಬೆಳಗಲು ಗ್ರಾಮದ ಶಶಿಕಲಾ (23) ಮೃತಳು. ಪತಿ ಮತ್ತು ಮಾವ ಕೆಲಸಕ್ಕೆ ತೆರಳಿದ ಬಳಿಕ ಘಟನೆ ಸಂಭವಿಸಿದೆ.
ಅತ್ತೆ ಮಂಜುಳಮ್ಮ ಜೊತೆಗೆ ಜಗಳವಾಗಿದೆ. ಇದರಿಂದ ಮನನೊಂದು ಶಶಿಕಲಾ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಶಶಿಕಲಾಗೆ ಒಂದೂವರೆ ವರ್ಷದ ಮಗು ಇದೆ.
ಘಟನೆ ಸಂಬಂಧ ಮಂಜುಳಮ್ಮ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಶಶಿಕಲಾ ಅವರ ಪೋಷಕರು ದೂರು ನೀಡಿದ್ದಾರೆ. ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – [email protected]
WhatsApp Number – 7411700200