SHIVAMOGGA LIVE NEWS | 16 MAY 2023
SHIMOGA : ದೇವಸ್ಥಾನದ ಹುಂಡಿ ಒಡೆದು (Hundi Theft) ಕಾಣಿಕೆ ಹಣ ಕಳ್ಳತನ ಮಾಡಲಾಗಿದೆ. ಜಾತ್ರೆ ಮುಗಿದ ರಾತ್ರಿಯೇ ಹುಂಡಿ ಒಡೆಯಲಾಗಿದೆ. ಪಿಳ್ಳಂಗೆರೆಯ ಪುರಾಣ ಪ್ರಸಿದ್ಧ ಶ್ರೀ ವೆಂಕಟರಮಣ ಮತ್ತು ಹನುಮಂತ ದೇವರ ದೇವಸ್ಥಾನದಲ್ಲಿ ಘಟನೆ ನಡೆದಿದೆ.
ಸೋಮವಾರ ರಾತ್ರಿ ಶ್ರೀ ವೆಂಕಟರಮಣ ಮತ್ತು ಹನುಮಂತ ದೇಸ್ಥಾನದೊಳಗೆ ನುಗ್ಗಿರುವ ಕಳ್ಳರು, ಹುಂಡಿ (Hundi Theft) ಒಡೆದಿದ್ದಾರೆ. ದೇಗುಲದ ಆವರಣದ ಹೊರಾಂಗಣದಲ್ಲಿರುವ ಹುಂಡಿ ಕಳ್ಳತನ ಮಾಡಲಾಗಿದೆ.
ಜಾತ್ರೆ ಮರುದಿನವೇ ಕಳ್ಳತನ
ಪಿಳ್ಳಂಗೆರೆ ದೇವಸ್ಥಾನದಲ್ಲಿ ಸೋಮವಾರ ರಥೋತ್ಸವ ನಡೆಯಿತು. ಸಾವಿರಾರು ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿ ಜಾತ್ರೆಯಲ್ಲಿ ಪಾಲ್ಗೊಂಡ ರಥೋತ್ಸವ ಕಣ್ತುಂಬಿಕೊಂಡಿದ್ದರು. ರಥೋತ್ಸವ ಮುಗಿದ ರಾತ್ರಿಯೇ ಕಳ್ಳರು ದೇಗುಲದೊಳಗೆ ನುಗ್ಗಿ ಹುಂಡಿ ಕಳ್ಳತನ ಮಾಡಿದ್ದಾರೆ.
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ
ಹಿಂದೆಯೂ ಕಳ್ಳತನವಾಗಿತ್ತು
ಪಿಳ್ಳಂಗೆರೆ ಶ್ರೀ ವೆಂಕಟರಮಣ ಮತ್ತು ಹನುಮಂತ ದೇವರ ದೇವಸ್ಥಾನದಲ್ಲಿ ಹುಂಡಿ ಒಡೆದು ಕಳ್ಳತನ ಮಾಡಿರುವುದು ಇದೇ ಮೊದಲಲ್ಲ. ಈ ಹಿಂದೆ ಹಲವು ಬಾರಿ ಇಂತಹ ಕೃತ್ಯ ನಡೆದಿದೆ. ಒಮ್ಮೆ ದೇವರ ಮೂರ್ತಿ ಮೇಲಿದ್ದ ಬಟ್ಟೆಗೆ ಬೆಂಕಿ ಹಾಕಿ, ಅದೇ ಬೆಳಕಿನಲ್ಲಿ ಹುಂಡಿ ಕಳವು ಮಾಡಿದ್ದರು. ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿರುವ ದೇವಸ್ಥಾನಕ್ಕೆ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಇಲ್ಲ, ಸಿಸಿಟಿವಿ ಕಣ್ಗಾವಲು ಇಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಇದನ್ನೂ ಓದಿ – ಮಧ್ಯರಾತ್ರಿ 12.30ಕ್ಕೆ ಮಾಜಿ ಸಚಿವ ಈಶ್ವರಪ್ಪಗೆ ಮಿಸ್ಡ್ ಕಾಲ್, ಎಸ್ಪಿಗೆ ದೂರು, ಎಲ್ಲಿಂದ ಬಂದಿತ್ತು ಫೋನ್?
ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200