ಶಿವಮೊಗ್ಗ ಲೈವ್.ಕಾಂ | ANANDAPURA NEWS | 28 ಆಗಸ್ಟ್ 2020
ಹುಲಿ ಉಗುರುಗಳನ್ನು ಮಾರಾಟ ಮಾಡಲು ಯತ್ನಿಸಿದವರ ಮೇಲೆ ದಾವಣಗೆರೆ ಐಜಿಪಿ ಸ್ಕ್ವಾಡ್ ಪೊಲೀಸರು ದಾಳಿ ನಡೆಸಿದ್ದಾರೆ. ಬಂಧಿತರಿಂದ ನಾಲ್ಕು ಹುಲಿ ಉಗುರುಗಳನ್ನು ವಶಕ್ಕೆ ಪಡೆಯಲಾಗಿದೆ.
ಆನಂದಪುರದ ಮಾರಿಕಾಂಬ ದೇಗುಲ ಎದುರಿನ ರಸ್ತೆಯಲ್ಲಿ ದಾಳಿ ನಡೆಸಲಾಗಿದೆ. ಇಲ್ಲಿನ ಅಶೋಕ ರಸ್ತೆಯ ಓಂಕೇಶ್ (56), ವಿಶ್ವನಾಥ್ (60) ಮತ್ತು ಗೌತಮಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಚ್ಕಾಳಸರದ ಮೋಹನ್ (35) ಬಂಧಿತರು.
ಐದು ಹುಲಿ ಉಗುರುಗಳನ್ನು ಮಾರಾಟಕ್ಕೆ ತಂದಿದ್ದು ಒಂದನ್ನು ಯಾರಿಗೋ ಮಾರಾಟ ಮಾಡಿರುವ ಶಂಕೆ ಇದೆ. ಆರೋಪಿಗಳ ವಿಚಾರಣೆ ಮುಂದುವರೆದಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]