ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ |SHIMOGA NEWS | 4 DECEMBER 2020
ಶಿವಮೊಗ್ಗ ನಗರದಲ್ಲಿ ಶಾಂತಿ ಕಾಪಾಡಲು ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಜನರು ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಎಂದು ಪೂರ್ವ ವಲಯ ಐಜಿಪಿ ರವಿ ಅವರು ಮನವಿ ಮಾಡಿದರು.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಐಜಿಪಿ ರವಿ, ಗುರುವಾರ ಶಿವಮೊಗ್ಗ ನಗರದಲ್ಲಿ ನಡೆದ ಘಟನೆಗಳಿಗೆ ಸಂಬಂಧಿಸಿದಂತೆ 62 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತೀವ್ರ ನಿಗಾ ಇರಿಸಲಾಗಿದೆ ಎಂದು ಹೇಳಿದರು.
ಕಟ್ಟುನಿಟ್ಟು ಕ್ರಮ ಕೈಗೊಳ್ಳಲಾಗಿದೆ
- ಕಾನೂನು ಸುವ್ಯವಸ್ಥೆ ಕಾಪಾಡಲು ನೆರೆಯ ಜಿಲ್ಲೆಗಳಿಂದ ಪೊಲೀಸರನ್ನು ಕರೆಯಿಸಲಾಗಿದೆ.
- 148 ಪ್ರದೇಶಗಳನ್ನು ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಎಂದು ಗುರುತಿಸಲಾಗಿದ್ದು, ಪೊಲೀಸ್ ಬಂದೋಬಸ್ತು ತೀವ್ರಗೊಳಿಸಲಾಗಿದೆ.
- 9 ಚೆಕ್ಪೋಸ್ಟ್ಗಳಲ್ಲಿ ಬಿಗಿ ಬಂದೋಬಸ್ತು ಮಾಡಲಾಗಿದ್ದು, ಹೊರಗಿನಿಂದ ಬರುವವರ ಮೇಲೆ ನಿಗಾ ಇರಿಸಲಾಗಿದೆ.
- 22 ಚೀತಾ ಮತ್ತು 13 ಗಸ್ತು ಸಂಚಾರಿ ವಾಹನಗಳು ನಗರದಾದ್ಯಂತ ನಿಗಾ ಇರಿಸಿದೆ.
ನಾಗೇಶ್ ಭೇಟಿಯಾದ ಐಜಿಪಿ
ಹಲ್ಲೆಗೊಳಗಾದ ಬಜರಂಗದಳ ಕಾರ್ಯಕರ್ತ ನಾಗೇಶ್ ಅವರನ್ನು ಐಜಿಪಿ ರವಿ ಅವರು ಭೇಟಿಯಾಗಿ ಘಟನೆ ಮಾಹಿತಿ ಪಡೆದರು. ಈ ವೇಳೆ ಹಲ್ಲೆಕೋರರ ಕುರಿತು ಮಾಹಿತಿ ಕೇಳಿದ್ದಾಗಿ ಐಜಿಪಿ ತಿಳಿಸಿದರು. ಈ ವೇಳೆ ನಾಗೇಶ್ ಹೇಳಿದ್ದೇನು? ಇಲ್ಲಿದೆ ವಿಡಿಯೋ ರಿಪೋರ್ಟ್
ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಮಾತನಾಡಿ, ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಎಲ್ಲಾ ಬಿಗಿ ಕ್ರಮಗಳನ್ನು ಕೈಗೊಂಡಿದ್ದಾರೆ. ಮುಂಜಾಗರೂಕತಾ ಕ್ರಮವಾಗಿ ನಗರ ವ್ಯಾಪ್ತಿಯಲ್ಲಿ 144 ನಿಷೇಧಾಜ್ಞೆ ವಿಧಿಸಲಾಗಿದೆ. ದೊಡ್ಡಪೇಟೆ, ಕೋಟೆ ಮತ್ತು ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕರ್ಫ್ಯೂ ಮುಂದುವರೆಸಲಾಗಿದೆ. ಹಾಲು, ಔಷಧಿ ಮತ್ತಿತರ ಅಗತ್ಯ ಸಾಮಾಗ್ರಿಗಳ ಪೂರೈಕೆಗೆ ಯಾವುದೇ ನಿರ್ಬಂಧ ವಿಧಿಸಲಾಗಿಲ್ಲ. ಜನರು ವದಂತಿಗಳಿಗೆ ಕಿವಿಗೊಡದೆ ಶಾಂತಿಯನ್ನು ಕಾಪಾಡಬೇಕೆಂದು ಅವರು ಮನವಿ ಮಾಡಿದರು.
ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಅವರು ಸುದ್ದಿಗೋಷ್ಠಿಯಲ್ಲಿದ್ದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















