ಶಿವಮೊಗ್ಗ ಲೈವ್.ಕಾಂ | ಶಿರಸಿ
ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಮಹಿಳಾ ಪ್ರಯಾಣಿಕರ ವ್ಯಾನಿಟಿ ಬ್ಯಾಗ್ನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದ ಅಂತರ ಜಿಲ್ಲೆಯ ಇಬ್ಬರು ಮಹಿಳೆಯರನ್ನು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.
ಶಿವಮೊಗ್ಗದ ಸುಶೀಲಾ ಸುರೇಶ (39) ಹಾಗೂ ಚನ್ನಗಿರಿಯ ಸಾಯಿಲಕ್ಷ್ಮೀ ಪ್ರಭುದಾಸ (36) ಬಂಧಿತರು. ಬಸ್ ನಿಲ್ದಾಣದಲ್ಲಿ ಬ್ಯಾಗ್ನ ಜಿಪ್ ತೆಗೆದು ಸುಮಾರು ₹3.52 ಲಕ್ಷ ಮೌಲ್ಯದ ಬಂಗಾರದ ನೆಕ್ಲೆಸ್, ಹಾರ, ಉಂಗುರ ಹಾಗೂ ಬೆಳ್ಳಿ ನಾಣ್ಯವನ್ನು ಕಳವು ಮಾಡಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ವಿಶೇಷ ತಂಡ ರಚಿಸಿ ಕಾರ್ಯಾಚರಣೆ ಕೈಗೊಂಡಿದ್ದು, ಆರೋಪಿಗಳಿಂದ ₹5 ಲಕ್ಷ ಮೌಲ್ಯದ 50 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ.

ಉತ್ತರ ಕನ್ನಡದ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಮಾರ್ಗದರ್ಶನದಲ್ಲಿ ಪಿಎಸ್ಐ ನರಸಿಂಹಲು ಟಿ. ಹಾಗೂ ನಾರಾಯಣ ರಾಠೋಡ ನೇತೃತ್ವದ ತಂಡ ಈ ಕಾರ್ಯಾಚರಣೆ ನಡೆಸಿದೆ.