ಶಿವಮೊಗ್ಗ: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿ ಶೀಟರ್ ಒಬ್ಬನ ಬರ್ಬರ ಹತ್ಯೆ ಮಾಡಲಾಗಿದೆ. ಶಿವಮೊಗ್ಗದ ಬೊಮ್ಮನಕಟ್ಟೆ ಬಡಾವಣೆಯಲ್ಲಿ ತಡರಾತ್ರಿ ಘಟನೆ (Incident) ಸಂಭವಿಸಿದೆ.
ಅವಿನಾಶ್ (32) ಕೊಲೆಯಾದವನು. ಬೊಮ್ಮನಕಟ್ಟೆಯ ಕೆರೆ ಏರಿ ಮೇಲೆ ಅವಿನಾಶ್ನ ಹತ್ಯೆಯಾಗಿತ್ತು. ಬೆಳಗ್ಗೆ ದಾರಿಯಲ್ಲಿ ಹೋಗುವವರು ಮೃತದೇಹ ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು ಎಂದು ತಿಳಿದು ಬಂದಿದೆ.
ಕೊಲೆ ಪ್ರಕರಣವೊಂದರಲ್ಲಿ ಅವಿನಾಶ್ ಜೈಲುಪಾಲಾಗಿದ್ದ. ಉಚ್ಛ ನಾಯಾಲಯದಲ್ಲಿ ಜಮೀನು ಪಡೆದು ಜೈಲಿನಿಂದ ಬಿಡುಗಡೆಯಾಗಿದ್ದ. ಜೀವನ ನಿರ್ವಹಣೆಗೆ ಟೈಲ್ಸ್ ಕೆಲಸ ಮಾಡುತ್ತಿದ್ದ. ಕಳೆದ ರಾತ್ರಿ ಮನೆಯಿಂದ ಹೊರ ಹೋಗಿದ್ದ ಅವಿನಾಶ್ ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದಾನೆ.

ಹೆಚ್ಚುವರಿ ರಕ್ಷಣಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ, ಡಿವೈಎಸ್ಪಿ ಸಂಜೀವ್ ಕುಮಾರ್, ಇನ್ಸ್ಪೆಕ್ಟರ್ ಸಂತೋಷ್ ಕುಮಾರ್ ಭೇಟಿ ನೀಡಿ ಪರಿಶೀಲಿಸಿದರು. ವಿನೋಬನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.




ಇದನ್ನೂ ಓದಿ » ಒಂದು ತಿಂಗಳ ಹಿಂದೆ ಉದ್ಘಾಟನೆಯಾದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿರುಕು, ಜನರ ಆಕ್ರೋಶ
