ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
BHADRAVATHI NEWS, 20 OCTOBER 2024 : ಟೆಲಿಗ್ರಾಂ ಆಪ್ನಲ್ಲಿ ಮೆಸೇಜ್ ಮಾಡಿ ಟ್ರಾವೆಲ್ಸ್ ಗ್ರೂಪ್ಗೆ ಹಣ ಹೂಡಿಕೆ (Investment) ಮಾಡಿದರೆ, ಶೇ.30ರಷ್ಟು ಕಮಿಷನ್ ಮತ್ತು ಪಾರ್ಟ್ ಟೈಮ್ ಉದ್ಯೋಗ ಕೊಡುವ ಭರವಸೆ ನೀಡಿ 21.90 ಲಕ್ಷ ರೂ. ವಂಚಿಸಲಾಗಿದೆ. ಭದ್ರಾವತಿ ತಾಲೂಕಿನ ಕೃಷಿಕರೊಬ್ಬರು (ಹೆಸರು ಗೌಪ್ಯ) ವಂಚನೆಗೊಳಗಾಗಿದ್ದಾರೆ.
ಟ್ರಾವೆಲ್ಸ್ ಪಾರ್ಟ್ನರ್ ಇಂಡಿಯಾ, 91 ಕ್ಲಬ್ ಸರ್ವಿಸ್ ಎಂಬ ಹೆಸರು ಬಳಸಿ ಕೃಷಿಕರೊಬ್ಬರಿಗೆ ಮೆಸೇಜ್ ಕಳುಹಿಸಲಾಗಿತ್ತು. ಅಧಿಕ ಲಾಭದ ಆಸೆಗೆ ಬಿದ್ದ ಕೃಷಿಕ ತನ್ನ ಬ್ಯಾಂಕ್ ಖಾತೆ, ಫೋನ್ ಪೇ ಮತ್ತು ಚಕ್ ಮೂಲಕವು ಹಣ ಪಾವತಿಸಿದ್ದಾರೆ. ಸತತ ಒಂದು ತಿಂಗಳು ಹಂತ ಹಂತವಾಗಿ 21.90 ಲಕ್ಷ ರೂ. ಹೂಡಿಕೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಗೆ ಇವತ್ತೂ ಅಲರ್ಟ್, ಎಲ್ಲೆಲ್ಲಿ ಎಷ್ಟಿದೆ ತಾಪಮಾನ? ಎಲ್ಲೆಲ್ಲಿ ಮಳೆಯಾಗುತ್ತೆ?
ಲಾಭಾಂಶ ದೊರೆಯದಿದ್ದಾಗ ವಂಚನೆಗೊಳಗಾಗಿರುವುದು ಅರಿವಿಗೆ ಬಂದಿದೆ. ಈ ಹಿನ್ನೆಲೆ, ಅಮ್ರಿತ್ ಪಾಟೇಲ್, ದಿವ್ಯ ದರ್ಶಿನಿ, ಸಾರಿಕಾ ಎಂಬುವವರ ಹೆಸರುಗಳನ್ನು ಉಲ್ಲೇಖಿಸಿ ಕೃಷಿಕ ದೂರು ನೀಡಿದ್ದಾರೆ. ಭದ್ರಾವತಿ ಓಲ್ಡ್ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ದಿನ ಭವಿಷ್ಯ | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ?
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















