SHIVAMOGGA LIVE NEWS | 9 APRIL 2024
SHIMOGA : ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಇಂಜಿನಿಯರ್ ಒಬ್ಬರಿಗೆ ಸೇರಿದ ಲ್ಯಾಪ್ಟಾಪ್ ಕಳ್ಳತನವಾಗಿದೆ. ಬೆಂಗಳೂರಿನಿಂದ ಯಲ್ಲಾಪುರಕ್ಕೆ ತೆರಳುತ್ತಿದ್ದ ಸರ್ಕಾರಿ ಬಸ್ ಶಿವಮೊಗ್ಗ ನಿಲ್ದಾಣಕ್ಕೆ ಬಂದು ನಿಂತಾಗ ಘಟನೆ ಸಂಭವಿಸಿದೆ.
ಲಕ್ಷ್ಮಿ ಮಹಾಬಲೇಶ್ವರ ಎಂಬುವವರು ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಸಾಫ್ಟ್ವೇರ್ ಡೆವಲಪರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಬೆಂಗಳೂರಿನಿಂದ ಉತ್ತರ ಕನ್ನಡಕ್ಕೆ ಬಸ್ಸಿನಲ್ಲಿ ತೆರಳುತ್ತಿದ್ದರು. ತಮ್ಮ ಸೀಟಿನ ಪಕ್ಕದಲ್ಲಿ ಲ್ಯಾಪ್ಟಾಪ್ ಬ್ಯಾಗ್ ಇರಿಸಿಕೊಂಡಿದ್ದರು. ಬಸ್ಸು ಬೆಳಗಿನ ಜಾವ 4.30ಕ್ಕೆ ಶಿವಮೊಗ್ಗ ನಿಲ್ದಾಣ ತಲುಪಿತ್ತು. ಈ ವೇಳೆ ಲಕ್ಷ್ಮಿ ಮಹಾಬಲೇಶ್ವರ ಅವರು ನಿದ್ರೆಗೆ ಜಾರಿದ್ದರು. 15 ನಿಮಿಷದ ಬಳಿ ಬಸ್ ಹೊರಟಿದ್ದು ನಿಲ್ದಾಣದಿಂದ ಹೊರ ಬಂದಾಗ ಎಚ್ಚರವಾಗಿದೆ. ಪಕ್ಕದ ಸೀಟಿನಲ್ಲಿದ್ದ ಬ್ಯಾಗ್ ಇರಲಿಲ್ಲ ಎಂದು ಆರೋಪಿಸಿದಾರೆ.
ಬ್ಯಾಗ್ನಲ್ಲಿ ಒಂದು ಲ್ಯಾಪ್ಟಾಪ್, ಕಂಪನಿಯ ಐಡಿ ಕಾರ್ಡ್, ಐ ಫೋನ್ ಮೊಬೈಲ್ ಇತ್ತು ದೂರು ನೀಡಿದಾರೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಸುತ್ತಮುತ್ತ ನಿಷೇಧಾಜ್ಞೆ, ಕಾರಣವೇನು? ಯಾವಾಗ ಜಾರಿಯಾಗುತ್ತೆ?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200