ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA | 19 ನವೆಂಬರ್ 2019
ಮಹಿಳೆಯೊಬ್ಬರನ್ನು ಅಪಹರಿಸಿ ಸುಲಿಗೆ ಮಾಡಿದ್ದ ಆರೋಪಿಗಳಿಗೆ ಶಿವಮೊಗ್ಗ ಕೋರ್ಟ್ ಶಿಕ್ಷೆ ವಿಧಿಸಿದೆ. ಮೂವರು ಆರೋಪಿಗಳು ಶಿವಮೊಗ್ಗ ಬಸ್ ನಿಲ್ದಾಣದಿಂದ ಮಹಿಳೆಯೊಬ್ಬರನ್ನು ಕಿಡ್ನಾಪ್ ಮಾಡಿದ್ದರು.
ಏನಿದು ಘಟನೆ?
ಬಾಳೆಕೊಪ್ಪದ ಸಹನಾ ಎಂಬುವವರನ್ನು ಶಿವಮೊಗ್ಗದ ಬಸ್ ನಿಲ್ದಾಣದಿಂದ ಅಪಹರಣ ಮಾಡಲಾಗಿತ್ತು. ಅನುಪಿನಕಟ್ಟೆ ಬಳಿ ಕೆರೆ ಅಂಗಳದಲ್ಲಿ ಸಹನಾ ಅವರ ಮೇಲೆ ಹಲ್ಲೆ ನಡೆಸಲಾಗಿತ್ತು. ಬಳಿಕ ಅವರ ಬಳಿ ಇದ್ದ ಮೊಬೈಲ್ ಕಿತ್ತುಕೊಂಡು, ಎಟಿಎಂನಿಂದ 9500 ರೂ. ಹಣ ಡ್ರಾ ಮಾಡಿಸಿಕೊಂಡ ದುಷ್ಕರ್ಮಿಗಳು ಅಲ್ಲಿಯೆ ಬಿಟ್ಟು ಪರಾರಿಯಾಗಿದ್ದರು. 2018ರ ಜೂನ್ 6ರಂದು ಘಟನೆ ನಡೆದಿತ್ತು.
ಸಿಕ್ಕಿಬಿದ್ದರು ಮೂವರು
ಪ್ರಕರಣ ದಾಖಲಿಸಿಕೊಂಡ ದೊಡ್ಡಪೇಟೆ ಠಾಣೆ ಪೊಲೀಸರು, ವಿಶೇಷ ತಂಡ ರಚಿಸಿಕೊಂಡರು. ಸಿಪಿಐ ಹರೀಶ್ ಪಟೇಲ್, ಸಿಬ್ಬಂದಿಗಳಾದ ವಿಜಯ್, ಶೇಖರ್, ಕಿರಣ್ ಮೋರೆ, ಪ್ರವೀಣ್, ಸುರೇಶ್ ಮತ್ತು ಉಮೇಶ್ ಕಾರ್ಯಾಚರಣೆ ನಡೆಸಿ ಮೂವರನ್ನು ಅರೆಸ್ಟ್ ಮಾಡಿದ್ದರು. ಬಂಧಿತರನ್ನು ಪದ್ಮಾ ಟಾಕೀಸ್ ಬಳಿಯ ಮುಬಾರಕ್ ಖಾನ್ (21), ತುಂಗಾನಗರದ ಸಮೀರ್ (28) ಮತ್ತು ಟಿಪ್ಪುನಗರದ ನಯಾಜ್ (22) ಎಂದು ಗುರುತಿಸಲಾಗಿತ್ತು.

ಆರೋಪಿಗಳಿಗೆ ತಕ್ಕ ಶಾಸ್ತಿ
ಪ್ರಕರಣದ ವಿಚಾರಣೆ ನಡೆಸಿದ ಶಿವಮೊಗ್ಗ ನ್ಯಾಯಾಲಯ ಇವತ್ತು ತೀರ್ಪು ಪ್ರಕಟಿಸಿದೆ. ಮೂವರಿಗು ಏಳು ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






