SHIMOGA NEWS, 14 SEPTEMBER 2024 : ಜಮೀನಿಗೆ ತೆರಳುವ ಜಾಗದ ವಿಚಾರದಲ್ಲಿ ಉಂಟಾದ ಜಗಳದಲ್ಲಿ (Altercation) ವೃದ್ಧರೊಬ್ಬರಿಗೆ ಗುಂಡು ಹಾರಿಸಿ ಗಾಯಗೊಳಿಸಿದ್ದ ವ್ಯಕ್ತಿಗೆ ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 5 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ. ತೀರ್ಥಹಳ್ಳಿ ತಾಲ್ಲೂಕಿನ ಜಟ್ಟಿನಮಕ್ಕಿ ಗ್ರಾಮದ ಅಶೋಕ (62) ಶಿಕ್ಷೆಗೆ ಒಳಗಾದವನು.
2018ರ ಏಪ್ರಿಲ್ 23ರಂದು ಜಟ್ಟಿನಮಕ್ಕಿಯ ಕೃಷ್ಣಮೂರ್ತಿ (64) ಮೇಲೆ ಗುಂಡು ಹಾರಿಸಿದ್ದನು. ಕೃಷ್ಣಮೂರ್ತಿ ಅವರ ಕತ್ತಿನ ಭಾಗಕ್ಕೆ ಗುಂಡು ತಗುಲಿ ತೀವ್ರ ಸ್ವರೂಪದ ಗಾಯವಾಗಿತ್ತು. ಈ ಬಗ್ಗೆ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ತೀರ್ಥಹಳ್ಳಿ ಠಾಣೆಯ ಇನ್ಸ್ಪೆಕ್ಟರ್ ಸುರೇಶ್ ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪ ದೃಢಪಟ್ಟ ಹಿನ್ನೆಲೆ ಶಿಕ್ಷೆ ವಿಧಿಸಿದೆ.
ದಂಡ ಕಟ್ಟಲು ವಿಫಲವಾದಲ್ಲಿ ಹೆಚ್ಚುವರಿಯಾಗಿ 5 ತಿಂಗಳು ಸಾದಾ ಸೆರೆವಾಸ ಶಿಕ್ಷೆ ಅನುಭವಿಸುವಂತೆ ಹಾಗೂ ದಂಡದ ಮೊತ್ತದಲ್ಲಿ ಕೃಷ್ಣಮೂರ್ತಿ ಅವರಿಗೆ ಪರಿಹಾರ ರೂಪದಲ್ಲಿ 25 ಸಾವಿರ ರೂ. ನೀಡುವಂತೆ ಆದೇಶಿಸಿದೆ. ಸರ್ಕಾರದ ಪರವಾಗಿ ವಕೀಲ ಎ.ಎಂ.ಸುರೇಶ್ ಕುಮಾರ್ ವಾದ ಮಂಡಿಸಿದ್ದರು.
ಇದನ್ನೂ ಓದಿ » 70 ವರ್ಷದ ವೃದ್ಧನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, ಕಾರಣವೇನು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200