ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಫೆಬ್ರವರಿ 2022
ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಖೈದಿಯೊಬ್ಬ ಬುಲೆಟ್ ಕ್ಯಾಮರಾ ಮತ್ತು ಟ್ಯೂಬ್ ಲೈಟ್’ಗಳಿಗೆ ಹಾನಿ ಮಾಡಿದ್ದಾನೆ. ಆತನ ವಿರುದ್ಧ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶರಾವತಿ ನಗರದ ಗಗನ್ ಅಲಿಯಾಸ್ ಆನಂದ ಎಂಬ ವಿಚಾರಣಾಧೀನ ಖೈದಿ ವಿರುದ್ಧ ಪ್ರಕರಣ ದಾಖಲಾಗಿದೆ.
ಹೇಗಾಯ್ತು ಘಟನೆ?
ಕೇಂದ್ರ ಕಾರಾಗೃಹದ ಶರಾವತಿ ವಿಭಾಗದಲ್ಲಿ ಖೈದಿಗಳು ಮತ್ತು ಸೆಲ್’ಗಳಲ್ಲಿ ದೈನಂದಿನ ತಪಾಸಣೆ ನಡೆಸಲಾಗುತ್ತಿತ್ತು. ಅನಧಿಕೃತ ವಸ್ತುಗಳು ತಂದಿಟ್ಟುಕೊಳ್ಳುವುದನ್ನು ತಡೆಯಲು ಜೈಲು ಸಿಬ್ಬಂದಿ ತಪಾಸಣೆ ಮಾಡುತ್ತಿದ್ದರು. ಆಗ ದಾಂಧಲೆ ಶುರು ಮಾಡಿದ ವಿಚಾರಣಾಧೀನ ಕೈದಿ ಗಗನ್, ಶರಾವತಿ ವಿಭಾಗದಲ್ಲಿದ್ದ 5 ಬುಲೆಟ್ ಕ್ಯಾಮರಾಗಳು ಮತ್ತು ಟ್ಯೂಬ್ ಲೈಟ್ ಗಳನ್ನು ಒಡೆದು ಹಾಕಿದ್ದಾನೆ.
ಸರ್ಕಾರದ ಆಸ್ತಿ ಹಾನಿಗೊಳಿಸಿದ ಹಿನ್ನೆಲೆ ಜೈಲು ಸಿಬ್ಬಂದಿ, ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ | ಶಿವಮೊಗ್ಗದ ಸೆಂಟ್ರಲ್ ಜೈಲ್ ಮೇಲೆ ರಾತ್ರೋರಾತ್ರಿ ಪೊಲೀಸರಿಂದ ದಾಳಿ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200