SHIVAMOGGA LIVE NEWS | 1 DECEMBER 2023
SHIMOGA : ಬೀರುವಿನಲ್ಲಿಟ್ಟಿದ್ದ ಚಿನ್ನಾಭರಣ ಕಳ್ಳತನವಾಗಿದ್ದು (Theft) ಮನೆಗೆ ಪೇಂಟ್ ಮಾಡಲು ಬಂದಿದ್ದವರ ಮೇಲೆ ಅನುಮಾನವಿದೆ ಎಂದು ಮಹಿಳೆಯೊಬ್ಬರು ದೂರು ನೀಡಿದ್ದಾರೆ. 4.70 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳುವಾಗಿದೆ ಎಂದು ಆರೋಪಿಸಲಾಗಿದೆ.
ವಿವೇಕಾನಂದ ಬಡಾವಣೆಯ ಚಂದ್ರಾವತಿ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ. ನ.9ರಂದು ಬೀರುವಿನಲ್ಲಿದ್ದ ಬಂಗಾರದ ಚೈನ್ ಮತ್ತು ಉಂಗುರ ನಾಪತ್ತೆಯಾಗಿತ್ತು. ನ.11ರಂದು ಬಂಗಾರದ ಬಳೆಗಳು, ಚೈನ್ ಮತ್ತು ಕಿವಿ ಓಲೆಗಳು ಕಳುವಾಗಿತ್ತು((Theft)). ಚಂದ್ರಾವತಿ ಅವರ ಮಗನ ಮದುವೆ ಸಮಾರಂಭ ಇದ್ದಿದ್ದರಿಂದ ಅವರು ತಡವಾಗಿ ದೂರು ದಾಖಲಿಸಿದ್ದಾಗಿ ತಿಳಿಸಿದ್ದಾರೆ.
ಇದನ್ನೂ ಓದಿ-ಅಡಿಕೆ ಕಳ್ಳರು ಅರೆಸ್ಟ್, ಪತ್ತೆಯಾಯ್ತು 300 ರಬ್ಬರ್ ಶೀಟ್, ಏನಿದು ಕೇಸ್? ಯಾರಿದು ಆರೋಪಿಗಳು?
ಪೇಂಟರ್ಗಳ ಮೇಲೆ ಶಂಕೆ
ಮದುವೆ ಹಿನ್ನೆಲೆ ಮನೆಗೆ ಪೇಂಟ್ ಮಾಡಿಸಲಾಗಿತ್ತು. ಈ ಕೆಲಸಕ್ಕೆ ಬೊಮ್ಮನಕಟ್ಟೆಯ ವ್ಯಕ್ತಿ ಮತ್ತು ಆತನ ಜೊತೆಗೆ ಇತರೆ ಮೂವರು ಬಂದಿದ್ದರು. ಅವರೆ ಚಿನ್ನಾಭರಣ ಕಳ್ಳತನ ಮಾಡಿರಬಹುದು ಎಂಬ ಶಂಕೆ ಇದೆ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ. ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200