SHIVAMOGGA LIVE NEWS | 14 MAY 2024
SHIMOGA : ಬಸ್ ಹತ್ತುವಾಗ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್ನ ಒಳಗೆ ಕರ್ಚೀಫ್ನಲ್ಲಿ ಕಟ್ಟಿಟ್ಟಿದ್ದ ಚಿನ್ನಭಾರಣ (Jewelry) ಕಳುವಾಗಿದೆ. ಶಿವಮೊಗ್ಗದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದೆ. ನ್ಯಾಮತಿ ತಾಲೂಕು ಚೀಲೂರು ನಿವಾಸಿ ಫಾಸಿಹಾ ಎಂಬುವವರ ವ್ಯಾನಿಟಿ ಬ್ಯಾಗ್ನಿಂದ ಚಿನ್ನಾಭರಣ ಕಳವು ಮಾಡಲಾಗಿದೆ.
ಫಾಸಿಹಾ ಅವರು ಸಂಬಂಧಿಯ ಮದುವೆ ಸಮಾರಂಭ ಮುಗಿಸಿ ಅಕ್ಕ ಮತ್ತು ತಮ್ಮನ ಪತ್ನಿ ಜೊತೆಗೆ ಮನೆಗೆ ಮರಳುತ್ತಿದ್ದರು. ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಬಸ್ ಹತ್ತುವಾಗ ರಶ್ ಇತ್ತು. ಬಸ್ ಹತ್ತಿ ಟಿಕೆಟ್ ಮಾಡಿಸಲು ಆಧಾರ್ ಕಾರ್ಡ್ ತೆಗೆಯಲು ವ್ಯಾನಿಟಿ ಬ್ಯಾಗ್ನತ್ತ ಗಮನ ಹರಿಸಿದಾಗ ಜಿಪ್ ತೆಗೆದಿತ್ತು. ಕರ್ಚೀಫ್ನಲ್ಲಿ ಆಭರಣಗಳನ್ನು ಕಟ್ಟಿಟ್ಟಿದ್ದು ನಾಪತ್ತೆಯಾಗಿತ್ತು. 1.12 ಲಕ್ಷ ರೂ. ಮೌಲ್ಯದ ಆಭರಣ ಕಳ್ಳನತವಾಗಿದೆ ಎಂದು ಫಾಸಿಹಾ ಅವರು ದೂರಿನಲ್ಲಿ ಉಲ್ಲೇಖಿಸಿದ್ದರೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಮಹಿಳೆಯರ ವ್ಯಾನಿಟಿ ಬ್ಯಾಗ್ನಿಂದ ಚಿನ್ನಾಭರಣ ಕಳ್ಳತನ ಅಗುತ್ತಿರುವುದು ಇದೇ ಮೊದಲೇನಲ್ಲ. ಪ್ರಯಾಣಿಕರ ದಟ್ಟಣೆ ಇರುವ ಸಂದರ್ಭ ನೂಕುನುಗ್ಗಲಿನಲ್ಲಿ ವ್ಯಾನಿಟಿ ಬ್ಯಾಗ್ನಿಂದ ಚಿನ್ನಾಭರಣ, ನಗದು ಕಳವು ಮಾಡಲಾಗುತ್ತಿದೆ. ಬಸ್ ಹತ್ತುವ ಸಂದರ್ಭ ಮಹಿಳೆಯರು ಎಚ್ಚರ ವಹಿಸಿದರೆ ಕಳ್ಳರ ಹಾವಳಿಯಿಂದ ತಪ್ಪಿಸಿಕೊಳ್ಳಬಹುದಾಗಿದೆ.
ಇದನ್ನೂ ಓದಿ – ಶಿವಮೊಗ್ಗ – ಹೊನ್ನಾಳಿ ರಸ್ತೆಯಲ್ಲಿ ಯಮನಂತೆ ಎದುರಿಗೆ ಬಂತು ಟ್ರಾಕ್ಟರ್, ವ್ಯಕ್ತಿ ಸಾವು
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200