SHIVAMOGGA LIVE NEWS | 11 APRIL 2024
SHIMOGA : ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಪುನಃ ಕಳ್ಳರ ಹಾವಳಿ ಹೆಚ್ಚಾಗಿದೆ. ಬಸ್ ಹತ್ತುವ ವೇಳೆ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್ನಲ್ಲಿದ್ದ ಚಿನ್ನ, ಬೆಳ್ಳಿ ಆಭರಣ, ಮೊಬೈಲ್ ಕಳ್ಳತನ ಮಾಡಲಾಗಿದೆ.
ಶಿವಮೊಗ್ಗದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ದಾವಣಗೆರೆ ಪ್ಲಾಟ್ಫಾರಂನಲ್ಲಿ ಘಟನೆ ಸಂಭವಿಸಿದೆ. ಬೆಂಗಳೂರು ನಿವಾಸಿ ಪ್ರತಿಭಾ ಎಂಬುವವರು ತಮ್ಮ ಚಿಕ್ಕಮ್ಮನೊಂದಿಗೆ ಬಸ್ ಹತ್ತುವಾಗ ರಶ್ ಇತ್ತು. ನೂಕುನುಗ್ಗಲಿನಲ್ಲಿ ಪ್ರತಿಭಾ ಅವರು ಬಸ್ ಹತ್ತಿ ಸೀಟಿನಲ್ಲಿ ಕುಳಿತಿದ್ದರು. ಕೆಲ ನಿಮಿಷದ ಬಳಿಕ ಕುಟುಂಬದವರಿಗೆ ಕರೆ ಮಾಡಲು, ಮೊಬೈಲ್ ತೆಗೆಯಲು ಹೋದಾಗ ವ್ಯಾನಿಟಿ ಬ್ಯಾಗ್ ಜಿಪ್ ತೆರೆದುಕೊಂಡಿತ್ತು. ಪರಿಶೀಲಿಸಿದಾಗ ಕಳ್ಳತನ ಆಗಿರುವುದು ಬೆಳಕಿಗೆ ಬಂದಿದೆ.
ವ್ಯಾನಿಟಿ ಬ್ಯಾಗ್ನಲ್ಲಿ ಇರಿಸಿದ್ದ ಮಾಂಗಲ್ಯ ಸರ, ಬೆಳ್ಳಿ ಕಾಲುಂಗುರು, ಮಕ್ಕಳ ಬೆಳ್ಳಿ ರಿಂಗ್, 16 ಸಾವಿರ ರೂ. ನಗದು, ರಿಯಲ್ ಮೀ ಮೊಬೈಲ್ ಸೇರಿ ಒಟ್ಟು 78 ಸಾವಿರ ರೂ. ಮೌಲ್ಯದ ವಸ್ತುಗಳ ಕಳ್ಳತನವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ‘ಚೆಕ್ಪೋಸ್ಟ್ನಲ್ಲಿ ಪೊಲೀಸ್, ಸರ್ಕಾರಿ ವಾಹನಗಳು, ಆಂಬುಲೆನ್ಸ್ಗಳ ತಪಾಸಣೆಗೆ ಸೂಚನೆʼ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200