ಬಸ್ಸಿನ ಸೀಟಿನಲ್ಲಿ ಕುಳಿತು ವ್ಯಾನಿಟಿ ಬ್ಯಾಗ್‌ ಕಡೆ ಗಮನ ಹರಿಸಿದ ಮಹಿಳೆಗೆ ಕಾದಿತ್ತು ಆಘಾತ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಖದೀಮರ ಹಾವಳಿ ಮುಂದುವರೆದಿದೆ. ಲಕ್ಷಾಂತರ ಮೌಲ್ಯದ ಚಿನ್ನಾಭರಣ (Jewels), ನಗದು ಕಳ್ಳತನವಾಗಿದೆ ಎಂದು ಮಲ್ಲಿಗೇನಹಳ್ಳಿಯ ಬಂಗಾರಮ್ಮ ಎಂಬುವವರು ದೂರು ನೀಡಿದ್ದಾರೆ.

ಬಂಗಾರಮ್ಮ ಸೊರಬದ ತಮ್ಮೂರಿಗೆ ತೆರಳಲು ಕೆಎಸ್‌ಆರ್‌ಟಿಸಿ ನಿಲ್ದಾಣಕ್ಕೆ ಆಗಮಿಸಿದ್ದರು. ಆನವಟ್ಟಿಗೆ ತೆರಳುವ ಬಸ್‌ ಬಂದಿದ್ದು, ಸೀಟು ಹಿಡಿದು ಕುಳಿತಿದ್ದರು. ಟಿಕೆಟ್‌ ಮಾಡಿಸಲು ವ್ಯಾನಿಟಿ ಬ್ಯಾಗ್‌ ತೆಗೆಯಲು ಮುಂದಾದಾಗ ಬ್ಯಾಗಿನ ಜಿಪ್‌ ತೆರೆದಿರುವುದು ಗೊತ್ತಾಗಿದೆ. ಪರಿಶೀಲಿಸಿದಾಗ ಅದರೊಳಗೆ ಇದ್ದ 25 ಗ್ರಾಂ ತೂಕದ ಒಂದು ಲಕ್ಷ ಮೌಲ್ಯದ ಕಾಸಿನ ಸರ, ₹2.29 ಲಕ್ಷ ಮೌಲ್ಯದ 36 ಗ್ರಾಂ ತೂಕದ ಮಾಂಗಲ್ಯ ಸರ, ₹2500 ನಗದು ನಾಪತ್ತೆಯಾಗಿತ್ತು. ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ಬಸ್‌ ಹತ್ತುವಾಗ ರಶ್‌ ಇತ್ತು. ಈ ಸಂದರ್ಭ ಕಳ್ಳರು ವ್ಯಾನಿಟಿ ಬ್ಯಾಗ್‌ನ ಜಿಪ್‌ ತೆಗೆದು ಚಿನ್ನಾಭರಣ, ನಗದು ಕದ್ದಿರುವ ಶಂಕೆ ಇದೆ ಎಂದು ಬಂಗಾರಮ್ಮ ಆರೋಪಿಸಿದ್ದಾರೆ. ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ತೀರ್ಥಹಳ್ಳಿ, ಹೊಸನಗರ, ಸಾಗರದಲ್ಲಿ ತಾಪಮಾನ ಹೆಚ್ಚಳ, ಉಳಿದ ತಾಲೂಕುಗಳಲ್ಲಿ ಹೇಗಿರುತ್ತೆ ವಾತಾವರಣ? ಇಲ್ಲಿದೆ ಡಿಟೇಲ್ಸ್‌

Jewels

Leave a Comment