ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 20 OCTOBER 2023
SHIMOGA : ಐರಾವತ ಬಸ್ಸಿನಿಂದ ಇಳಿದು ಶೌಚಾಲಯಕ್ಕೆ ಹೋಗಿ ಬರುವಷ್ಟರಲ್ಲಿ ಮಹಿಳೆಯೊಬ್ಬರ ಬ್ಯಾಗಿನಲ್ಲಿ (BAG) ಇರಿಸಿದ್ದ ಚಿನ್ನಾಭರಣ ಕಳ್ಳತನ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಶಿವಮೊಗ್ಗ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ (Bus Stand) ಘಟನೆ ಸಂಭವಿಸಿದೆ.
ಕುಂದಾಪುರದ (Kunadapura) ಲಕ್ಷ್ಮಿ ಶೆಣೈ ಎಂಬುವವರ ಬ್ಯಾಗಿನಲ್ಲಿದ್ದ 2.80 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳುವಾಗಿದೆ. ಚಿನ್ನದ ಬಳೆ, ಚಿನ್ನದ ಹವಳದ ಚೈನ್, ಚಿನ್ನದ ಮುತ್ತಿನ ಸರ ಕಳ್ಳತನವಾಗಿದೆ ಎಂದು ಆರೋಪಿಸಿ ದೂರು ನೀಡಲಾಗಿದೆ.
ಇದನ್ನೂ ಓದಿ- ದಸರಾ ರಜೆ, ಪ್ರಯಾಣಿಕರ ಅನುಕೂಲಕ್ಕಾಗಿ KSRTCಯಿಂದ ವಿಶೇಷ ವ್ಯವಸ್ಥೆ
ಹೇಗಾಯ್ತು ಘಟನೆ?
ಸಂಬಂಧಿಯೊಬ್ಬರ ಮನೆಯಲ್ಲಿ ಕಾರ್ಯಕ್ರಮ ಮುಗಿಸಿ ಲಕ್ಷ್ಮಿ ಶೆಣೈ ಬೆಂಗಳೂರಿನಿಂದ ಸಾಗರಕ್ಕೆ ಐರಾವತ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದರು. ಅ.16ರಂದು ಬೆಳಗಿನ ಜಾವ 4.10ಕ್ಕೆ ಬಸ್ಸು ಶಿವಮೊಗ್ಗ ನಿಲ್ದಾಣ ತಲುಪಿತ್ತು. ಲಕ್ಷ್ಮಿ ಶೆಣೈ ಬಸ್ ಇಳಿದು ಶೌಚಾಲಯಕ್ಕೆ ಹೋಗಿ ತಮ್ಮ ಸೀಟ್ಗೆ ಮರಳಿದ್ದರು. ಬಸ್ಸಿನ ಲಗೇಜ್ ಕ್ಯಾಬಿನ್ನಲ್ಲಿ ಅವರ ಬ್ಯಾಗ್ ಇತ್ತು. ಬೆಳಗ್ಗೆ 5.30ಕ್ಕೆ ಬಸ್ಸು ಸಾಗರ ತಲುಪಿತ್ತು. ಅಳಿಯನ ಮನಗೆ ಹೋಗಿ ಬ್ಯಾಗ್ ಪರಿಶೀಲಿಸಿದಾಗ ಚಿನ್ನಾಭರಣ ಕಾಣೆಯಾಗಿತ್ತು.
ಶಿವಮೊಗ್ಗ ನಿಲ್ದಾಣದಲ್ಲಿ ಶೌಚಾಲಯಕ್ಕೆ ಹೋಗಿದ್ದ ವೇಳೆ ಚಿನ್ನಾಭರಣ ಕಳ್ಳತನ ಆಗಿರಬಹುದು ಎಂದು ಶಂಕಿಸಿ ದೂರು ನೀಡಿದ್ದಾರೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






